ನಮ್ಮ ಮೈಸೂರ ದಸರಾ 2024

ಜಂಬೂಸವಾರಿ ಮೆರವಣಿಗೆ: ʻಸತ್ತಿಗೆ ಕುಣಿತʼ ಕಲಾತಂಡಕ್ಕೆ ಪ್ರಥಮ ಬಹುಮಾನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿ, ಪ್ರದರ್ಶನ ನೀಡಿದ ಉತ್ತಮ ಕಲಾ ತಂಡಗಳಿಗೆ ಬಹುಮಾನ ಘೋಷಿಸಲಾಗಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದರಾಪುದ ಸಂಜೀತ ಸಿ.ಕೋತ ನೇತೃತ್ವದ ರೇವಣ್ಣಸಿದ್ದೇಶ್ವರ ಯುವಕರ ಕಲಾಸಂಘದ ಸತ್ತಿಗೆ ಕುಣಿತಕ್ಕೆ ಪ್ರಥಮ ಬಹುಮಾನ ದೊರೆತಿದೆ. ಈ ಬಹುಮಾನವು 15ಸಾವಿರವನ್ನು ಒಳಗೊಂಡಿದೆ.

ಯಾದಗಿರಿಯ ವಿಶ್ವಾಸಪುರ ತಾಂಡಾದ ಮನೋಹರ ಖೇಮು ಪವಾರ ನೇತೃತ್ವದ ಲಂಬಾಣಿ ನೃತ್ಯ ಕಲಾತಂಡ, ಮಂಡ್ಯ ಜಿಲ್ಲೆಯ ಮದ್ದೂರಿನ ಕ್ಯಾತಘಟ್ಟದ ಕೀರ್ತಿನಿ ಮತ್ತು ಪ್ರಮೋದಿನಿ ನೇತೃತ್ವದ ಪೂಜಾಕುಣಿತ ಕಲಾವಿದರ ತಂಡ, ಮದ್ದೂರಿನ ಚಿಕ್ಕರಸಿನಕೆರೆಯ ಕಾಲಭೈರವೇಶ್ವರ ಯುವಕರ ತಂಡಗಳು ದ್ವಿತೀಯ ಸ್ಥಾನ ಪಡೆದು ತಲಾ 5 ಸಾವಿರು ನಗದು ಬಹುಮಾನ ಗಳಿಸಿದೆ.

ಹಾವೇರಿ ಜಿಲ್ಲೆಯ ವೀರಭದ್ರೇಶ್ವರ ಪುರವಂತಿಕೆ ಕಲಾತಂಡ ಹಾಗೂ ಕೋಲಾರ ಜಿಲ್ಲೆಯ ಸುಳದೇನಹಳ್ಳಿಯ ಮಾರುತಿ ಕಲಾವಿದರ ಸಂಘದ ಗಾರುಡಿ ಗೊಂಬೆ ತೃತೀಯ ಬಹುಮಾನ ಪಡೆದು, ತಲಾ 2.500 ಪಡೆದಿವೆ ಎಂದು ದಸರಾ ಮೆರವಣಿಗೆ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಸೀಮಾ ಲಾಟ್ಕಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

48 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

52 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

57 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

1 hour ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

1 hour ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago