ವಸ್ತು ಪ್ರದರ್ಶನದಲ್ಲಿ ಮೈಮುಲ್ ಮಳಿಗೆ ಉದ್ಘಾಟಿಸಿ ಮೈಮುಲ್ ಅಧ್ಯಕ್ಷ ಆರ್.ಚೆಲುವರಾಜ್ ಕರೆ
ಮೈಸೂರು: ಈ ಬಾರಿ ನಾಡಹಬ್ಬ ದಸರೆಗೆ ಮೈಮುಲ್ ನಿಂದ ಶೇ.10 ರಷ್ಟು ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡುವುದಾಗಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಅಧ್ಯಕ್ಷ ಆರ್. ಚೆಲುವರಾಜು ಹೇಳಿದರು.
ನಗರದ ದಸರ ವಸ್ತು ಪ್ರದರ್ಶನ ಆವರಣದಲ್ಲಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಒಕ್ಕೂಟ ಜನರಿಗೆ ಹೊಸ ಆಫರ್ ನೀಡುವ ಉದ್ದೇಶದಿಂದ ದಸರೆಯಲ್ಲಿ ಶೇ.10 ರಷ್ಟು ರಿಯಾಯಿತಿ ದರದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ಹೇಳಿದರು.
ಶೀಘ್ರ ಚಾಕಲೆಟ್
ಮೈಮುಲ್ ಉತ್ಪನ್ನಗಳ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಚಾಕೂಲೆಟ್, ಪನ್ನೀರ್ ಗಳನ್ನು ಸಹ ತಯಾರು ಮಾಡುವ ಯೋಜನೆ ಬಗ್ಗೆ ಚಿಂತನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಡಿಪಿಆರ್ ಸರ್ಕಾರಕ್ಕೆ ಸಲ್ಲಿಸಲಾಗುವುದು. ಇನ್ನೂ ಪ್ರಸ್ತುತ ಮೈಮುಲ್ ಡೇರಿಯಲ್ಲಿ ಬರೋಬ್ಬರಿ 9 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಇದರಲ್ಲಿ 4 ಲಕ್ಷ ಲೀಟರ್ ಹಾಲನ್ನು ಜನತೆ ಬಳಸುತ್ತಿದ್ದಾರೆ. ಉಳಿದ ಹಾಲನ್ನು ಪುಡಿ ಮಾಡಿ ಶೇಖರಿಸಿ ಉಪ ಉತ್ಪನ್ನಗಳನ್ನು ತಯಾರು ಮಾಡಲಾಗುತ್ತಿದೆ. ಹೀಗಾಗಿ ರೈತರ ಹಿತರ ದೃಷ್ಟಿಯಿಂದ ಚಾಕ್ ಲೆಟ್, ಪನ್ನೀರ್, ಚೀಸ್ ಸೇರಿ ಹಲವು ಉಪ ಉತ್ಪನ್ನಗಳ ತಯಾರಿಕೆಗೆ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಕೇರಳದಲ್ಲಿ 20 ಸಾವಿರ ಲೀಟರ್ ಹಾಲು ಮಾರಾಟ ಮಾಡುತ್ತಿದ್ದೇವೆ. ತಮಿಳುನಾಡಿನ ಚೆನೈ ನಲ್ಲಿ 50 ಲೀಟರ್ ಹಾಲು ಮಾರಾಟ ಮಾಡುತ್ತಿದ್ದು ಅವುಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನ ಮಾಡಲಾಗುವುದು ಎಂದರು.
ಐದು ದಶಕದ ಹಿಂದೆ ಪ್ರಾರಂಭಗೊಂಡ ಮೈಮುಲ್ ನಲ್ಲಿ ಈಗ 1205 ಸಂಘಗಳಾಗಿವೆ. 398 ಮಹಿಳಾ ಸಂಘಗಳಿವೆ. ರೈತರು ಇನ್ನೂ ಶೇ.25 ರಷ್ಟು ಪಾಲಿಸಿಯ ಮೊತ್ತ ಹಾಗೂ ಜಿಎಸ್ ಟಿ ಕಟ್ಟಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ಮೊತ್ತ ಕಟ್ಟಬೇಡಿ ಎಂದರು.
ಇನ್ನೂ ನಮ್ಮೆಲ್ಲ ರೈತರು ಹಾಗೂ ಗ್ರಾಹಕರಿಗೆ ನವರಾತ್ರಿ ದಸರಾ ಹಬ್ಬದ ಶುಭಾಶಯಗಳು. ಮೈಸೂರು ನಂದಿನಿಯ ಉತ್ಪನ್ನಗಳಾದ ಪೇಡಾ, ಮೈಸೂರು ಪಾಕ, ಕೇಸರಿ ಪೇಡಾ, ಬರ್ಫಿ, ಗೋದಿ, ಲಾಡು ಹಾಗೂ ಕ್ಯಾಷೋ ಬರ್ಫಿ, ಮ್ಯಾಂಗೋ ಲಸ್ಸಿ ಇತರೆ ತಂಪು ಪಾನೀಯಗಳನ್ನು ಹೆಚ್ಚೆಚ್ಚು ಬಳಸಿ ಎಂದು ತಿಳಿಸಿದರು.
ಮೈಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಸುರೇಶ್ ನಾಯ್ಕ್, ಒಕ್ಕೂಟದ ನಿರ್ದೇಶಕರಾದ
ಎ.ಟಿ.ಸೋಮಶೇಖರ್, ಕೆ.ಜಿ.ಮಹೇಶ್, ಕೆ.ಊಮಾಶಂಕರ್, ಕೆ.ಈರೇಗೌಡ, ಸಿ.ಓಂಪ್ರಕಾಶ್, ಕೆ.ಎಸ್.ಕುಮಾರ್,
ಪಿ.ಎಂ.ಪ್ರಸನ್ನ, ಶ್ರೀಮತಿ ದ್ರಾಕ್ಷಾಯಣಿ ಬಸವರಾಜಪ್ಪ, ಶ್ರೀಮತಿ ಲೀಲಾ ಬಿ.ಕೆ.ನಾಗರಾಜು, ಶ್ರೀಮತಿ ಬಿ.ನೀಲಾಂಬಿಕೆ ಮಹೇಶ್ ಕುರಹಟ್ಟಿ, ಶ್ರೀಮತಿ ಎ.ಶಿವಗಾಮಿ ಷಣ್ಮುಗಂ, ಬಿ.ಎನ್. ಸದಾನಂದ, ಬಿ.ಗುರುಸ್ವಾಮಿ, ಬಿ.ಎ. ಪ್ರಕಾಶ್, ಶ್ರೀಮತಿ ಎ.ಬಿ. ಮಲ್ಲಿಕಾ ರವಿಕುಮಾರ್, ಸಿ.ಪ್ರಸಾದ್ ರೆಡ್ಡಿ, ಪಶುಸಂಗೋಪನ ಇಲಾಖೆ ಪ್ರತಿನಿಧಿ ಡಾ.ನಾಗರಾಜು, ಎಚ್.ಎಸ್.ಮಂಜುನಾಥ್, ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಪ್ರತಿನಿಧಿ ರಜನಿ ತ್ರಿಪಾಠಿ ಇನ್ನಿತರರು ಉಪಸ್ಥಿತರಿದ್ದರು.
ನಂದಿನಿ ಉತ್ಪನ್ನ ನಮ್ಮೆಲ್ಲರ ಹೆಮ್ಮೆಯಾಗಿದೆ.ಇದರ ಬಳಕೆ ಬಗ್ಗೆ ಜಾಗೃತಿ ಮೂಡಿಸಲು ಮಳಿಗೆ ತೆರೆಯಲಾಗಿದೆ. ದೇಶದ ದುಬೈ ಸೇರಿ ಅನೇಕ ಕಡೆಗಳಲ್ಲಿ ಮಾರಾಟ ಮಾಡುತ್ತಿರುವುದು ಸಂತಸದ ವಿಚಾರ ಮತ್ತಷ್ಟು ಮಂದಿ ಇದರ ಬಳಕೆ ಮಾಡುವ ಮೂಲಕ ನಮ್ಮ ರೈತರ ಜೀವನಕ್ಕೆ ನೆರವಾಗೋಣ.
– ಅಯೂಬ್ ಖಾನ್, ಅಧ್ಯಕ್ಷ ವಸ್ತು ಪ್ರದರ್ಶನ ಪ್ರಾಧಿಕಾರ.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…