ನಮ್ಮ ಮೈಸೂರ ದಸರಾ 2024

ನಮ್ಮ ಮೈಸೂರ ದಸರಾ 2024: ಈ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡಬೇಡಿ

ವಿಶ್ವವಿಖ್ಯಾತ ಮೈಸೂರು ದಸರಾ ನಾಳೆಯಿಂದ ( ಅಕ್ಟೋಬರ್‌ 3 ) ಆರಂಭವಾಗುತ್ತಿದ್ದು, ಪೊಲೀಸ್‌ ಇಲಾಖೆ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಮತ್ತು ದಸರಾ ಕಾರ್ಯಕ್ರಮಗಳು ಅಡ್ಡಿಯಿಲ್ಲದೇ ನಡೆಯಲು ಸಂಚಾರಿ ಮಾರ್ಗಗಳಲ್ಲಿ ಕೆಲ ಬದಲಾವಣೆಯನ್ನು ಮಾಡಿಕೊಂಡಿದೆ. ಅದರಂತೆ ವಾಹನ ನಿಲುಗಡೆ ವಿಷಯದಲ್ಲಿಯೂ ಸಹ ಕೆಲ ನಿಯಮಗಳನ್ನು ವಿಧಿಸಿದೆ.

ಪ್ರತಿ ದಿನ ಮಧ್ಯಾಹ್ನ 4ರಿಂದ ರಾತ್ರಿ 12ರವರೆಗೆ ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ

* ಎಸ್. ಆರ್. ರಸ್ತೆಯಲ್ಲಿ ಕೆ. ಆರ್. ವೃತ್ತದಿಂದ ಬಸವೇಶ್ವರ ವೃತ್ತದವರೆಗೆ
* ಪುರಂದರ ರಸ್ತೆಯಲ್ಲಿ ನಗರಪಾಲಿಕೆ ವೃತ್ತದಿಂದ ಬಿ. ಎನ್. ರಸ್ತೆ ಜಂಕ್ಷನ್‌ವರೆಗೆ
* ಬಿ. ಎನ್. ರಸ್ತೆಯಲ್ಲಿ ಜೆ. ಎಸ್. ಎಸ್. ವೃತ್ತದಿಂದ ಹಾರ್ಡಿಂಜ್ ವೃತ್ತದವರೆಗೆ
* ಎ. ವಿ. ರಸ್ತೆಯಲ್ಲಿ ಹಾರ್ಡಿಂಜ್ ವೃತ್ತದಿಂದ ಕೆ. ಆರ್. ವೃತ್ತದವರೆಗೆ
* ಅಶೋಕ ರಸ್ತೆಯಲ್ಲಿ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ ?
* ಅಶೋಕ ರಸ್ತೆಯಲ್ಲಿ ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ ಹಾಗೂ ಬಲರಾಮ ದ್ವಾರದ ಮುಂಭಾಗ ಇರುವ ಖಾಲಿ ಸ್ಥಳ ಸೇರಿದಂತೆ
* ಫೌಂಟೇನ್ ವೃತ್ತದಿಂದ ಮಿಲೇನಿಯಂ ವೃತ್ತದವರೆಗೆ
* ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬಿಎನ್ ರಸ್ತೆ ಜಂಕ್ಷನ್‌ನಿಂದ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‌ವರೆಗೆ.
* ಇಟ್ಟಿಗೆಗೂಡಿನ ಹೊಸ ಬೀದಿ ೫ನೇ ತಿರುವು ರಸ್ತೆಯಲ್ಲಿ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‌ನಿಂದ ವಸ್ತು ಪ್ರರ್ದಶನದ ಪೂರ್ವ ದ್ವಾರದವರೆಗೆ.
* ಮಾನಸರ ರಸ್ತೆಯಲ್ಲಿ ವಾಣಿ ವಿಲಾಸ ರಸ್ತೆ ಜಂಕ್ಷನ್ ನಿಂದ ಲೋಕರಂಜನ್ ಮಹಲ್ ರಸ್ತೆ ಜಂಕ್ಷನ್‌ವರೆಗೆ
* ಮಲೈಮಹದೇಶ್ವರ ರಸ್ತೆಯಲ್ಲಿ ಬಿ. ಎನ್. ರಸ್ತೆ ಜಂಕ್ಷನ್‌ನಿಂದ (ಛತ್ರಿಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ
* ಸರ್ಕಾರಿ ಭವನದ ರಸ್ತೆಯಲ್ಲಿ, ಸರ್ಕಾರಿ ಭವನದ ದಕ್ಷಿಣ ದ್ವಾರದ ಜಂಕ್ಷನ್‌ನಿಂದ ದಕ್ಷಿಣಕ್ಕೆ ಹಾರ್ಡಿಂಜ್ ವೃತ್ತದವರೆಗೆ.

* ಅ. 12ರಂದು ಬೆಳಿಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ದಸರಾ ಮೆರವಣಿಗೆಯು ಸಾಗುವ ಮಾರ್ಗದಲ್ಲಿ ಬಲರಾಮ ದ್ವಾರ ಎ. ವಿ. ರಸ್ತೆ, ಕೆ. ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಬಂಬೂಬಜಾರ್, ಹೈವೇ ಹೋಟೆಲ್ ವೃತ್ತ ನೆಲ್ಸನ್ ಮಂಡೇಲಾ ರಸ್ತೆ ಬನ್ನಿಮಂಟಪದ ಮುಖ್ಯದ್ವಾರ ಮಿಲೇನಿಯಂ ವೃತ್ತದವರೆಗೆ ಎಲ್ಲ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

2 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

2 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

2 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

2 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

2 hours ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

2 hours ago