ನಮ್ಮ ಮೈಸೂರ ದಸರಾ 2024

ನಮ್ಮ ಮೈಸೂರ ದಸರಾ 2024: ಈ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡಬೇಡಿ

ವಿಶ್ವವಿಖ್ಯಾತ ಮೈಸೂರು ದಸರಾ ನಾಳೆಯಿಂದ ( ಅಕ್ಟೋಬರ್‌ 3 ) ಆರಂಭವಾಗುತ್ತಿದ್ದು, ಪೊಲೀಸ್‌ ಇಲಾಖೆ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಮತ್ತು ದಸರಾ ಕಾರ್ಯಕ್ರಮಗಳು ಅಡ್ಡಿಯಿಲ್ಲದೇ ನಡೆಯಲು ಸಂಚಾರಿ ಮಾರ್ಗಗಳಲ್ಲಿ ಕೆಲ ಬದಲಾವಣೆಯನ್ನು ಮಾಡಿಕೊಂಡಿದೆ. ಅದರಂತೆ ವಾಹನ ನಿಲುಗಡೆ ವಿಷಯದಲ್ಲಿಯೂ ಸಹ ಕೆಲ ನಿಯಮಗಳನ್ನು ವಿಧಿಸಿದೆ.

ಪ್ರತಿ ದಿನ ಮಧ್ಯಾಹ್ನ 4ರಿಂದ ರಾತ್ರಿ 12ರವರೆಗೆ ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ

* ಎಸ್. ಆರ್. ರಸ್ತೆಯಲ್ಲಿ ಕೆ. ಆರ್. ವೃತ್ತದಿಂದ ಬಸವೇಶ್ವರ ವೃತ್ತದವರೆಗೆ
* ಪುರಂದರ ರಸ್ತೆಯಲ್ಲಿ ನಗರಪಾಲಿಕೆ ವೃತ್ತದಿಂದ ಬಿ. ಎನ್. ರಸ್ತೆ ಜಂಕ್ಷನ್‌ವರೆಗೆ
* ಬಿ. ಎನ್. ರಸ್ತೆಯಲ್ಲಿ ಜೆ. ಎಸ್. ಎಸ್. ವೃತ್ತದಿಂದ ಹಾರ್ಡಿಂಜ್ ವೃತ್ತದವರೆಗೆ
* ಎ. ವಿ. ರಸ್ತೆಯಲ್ಲಿ ಹಾರ್ಡಿಂಜ್ ವೃತ್ತದಿಂದ ಕೆ. ಆರ್. ವೃತ್ತದವರೆಗೆ
* ಅಶೋಕ ರಸ್ತೆಯಲ್ಲಿ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ ?
* ಅಶೋಕ ರಸ್ತೆಯಲ್ಲಿ ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ ಹಾಗೂ ಬಲರಾಮ ದ್ವಾರದ ಮುಂಭಾಗ ಇರುವ ಖಾಲಿ ಸ್ಥಳ ಸೇರಿದಂತೆ
* ಫೌಂಟೇನ್ ವೃತ್ತದಿಂದ ಮಿಲೇನಿಯಂ ವೃತ್ತದವರೆಗೆ
* ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬಿಎನ್ ರಸ್ತೆ ಜಂಕ್ಷನ್‌ನಿಂದ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‌ವರೆಗೆ.
* ಇಟ್ಟಿಗೆಗೂಡಿನ ಹೊಸ ಬೀದಿ ೫ನೇ ತಿರುವು ರಸ್ತೆಯಲ್ಲಿ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‌ನಿಂದ ವಸ್ತು ಪ್ರರ್ದಶನದ ಪೂರ್ವ ದ್ವಾರದವರೆಗೆ.
* ಮಾನಸರ ರಸ್ತೆಯಲ್ಲಿ ವಾಣಿ ವಿಲಾಸ ರಸ್ತೆ ಜಂಕ್ಷನ್ ನಿಂದ ಲೋಕರಂಜನ್ ಮಹಲ್ ರಸ್ತೆ ಜಂಕ್ಷನ್‌ವರೆಗೆ
* ಮಲೈಮಹದೇಶ್ವರ ರಸ್ತೆಯಲ್ಲಿ ಬಿ. ಎನ್. ರಸ್ತೆ ಜಂಕ್ಷನ್‌ನಿಂದ (ಛತ್ರಿಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ
* ಸರ್ಕಾರಿ ಭವನದ ರಸ್ತೆಯಲ್ಲಿ, ಸರ್ಕಾರಿ ಭವನದ ದಕ್ಷಿಣ ದ್ವಾರದ ಜಂಕ್ಷನ್‌ನಿಂದ ದಕ್ಷಿಣಕ್ಕೆ ಹಾರ್ಡಿಂಜ್ ವೃತ್ತದವರೆಗೆ.

* ಅ. 12ರಂದು ಬೆಳಿಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ದಸರಾ ಮೆರವಣಿಗೆಯು ಸಾಗುವ ಮಾರ್ಗದಲ್ಲಿ ಬಲರಾಮ ದ್ವಾರ ಎ. ವಿ. ರಸ್ತೆ, ಕೆ. ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಬಂಬೂಬಜಾರ್, ಹೈವೇ ಹೋಟೆಲ್ ವೃತ್ತ ನೆಲ್ಸನ್ ಮಂಡೇಲಾ ರಸ್ತೆ ಬನ್ನಿಮಂಟಪದ ಮುಖ್ಯದ್ವಾರ ಮಿಲೇನಿಯಂ ವೃತ್ತದವರೆಗೆ ಎಲ್ಲ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

8 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

36 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago