ನಮ್ಮ ಮೈಸೂರ ದಸರಾ 2024

ನಮ್ಮ ಮೈಸೂರ ದಸರಾ 2024: ಈ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡಬೇಡಿ

ವಿಶ್ವವಿಖ್ಯಾತ ಮೈಸೂರು ದಸರಾ ನಾಳೆಯಿಂದ ( ಅಕ್ಟೋಬರ್‌ 3 ) ಆರಂಭವಾಗುತ್ತಿದ್ದು, ಪೊಲೀಸ್‌ ಇಲಾಖೆ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಮತ್ತು ದಸರಾ ಕಾರ್ಯಕ್ರಮಗಳು ಅಡ್ಡಿಯಿಲ್ಲದೇ ನಡೆಯಲು ಸಂಚಾರಿ ಮಾರ್ಗಗಳಲ್ಲಿ ಕೆಲ ಬದಲಾವಣೆಯನ್ನು ಮಾಡಿಕೊಂಡಿದೆ. ಅದರಂತೆ ವಾಹನ ನಿಲುಗಡೆ ವಿಷಯದಲ್ಲಿಯೂ ಸಹ ಕೆಲ ನಿಯಮಗಳನ್ನು ವಿಧಿಸಿದೆ.

ಪ್ರತಿ ದಿನ ಮಧ್ಯಾಹ್ನ 4ರಿಂದ ರಾತ್ರಿ 12ರವರೆಗೆ ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ

* ಎಸ್. ಆರ್. ರಸ್ತೆಯಲ್ಲಿ ಕೆ. ಆರ್. ವೃತ್ತದಿಂದ ಬಸವೇಶ್ವರ ವೃತ್ತದವರೆಗೆ
* ಪುರಂದರ ರಸ್ತೆಯಲ್ಲಿ ನಗರಪಾಲಿಕೆ ವೃತ್ತದಿಂದ ಬಿ. ಎನ್. ರಸ್ತೆ ಜಂಕ್ಷನ್‌ವರೆಗೆ
* ಬಿ. ಎನ್. ರಸ್ತೆಯಲ್ಲಿ ಜೆ. ಎಸ್. ಎಸ್. ವೃತ್ತದಿಂದ ಹಾರ್ಡಿಂಜ್ ವೃತ್ತದವರೆಗೆ
* ಎ. ವಿ. ರಸ್ತೆಯಲ್ಲಿ ಹಾರ್ಡಿಂಜ್ ವೃತ್ತದಿಂದ ಕೆ. ಆರ್. ವೃತ್ತದವರೆಗೆ
* ಅಶೋಕ ರಸ್ತೆಯಲ್ಲಿ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ ?
* ಅಶೋಕ ರಸ್ತೆಯಲ್ಲಿ ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ ಹಾಗೂ ಬಲರಾಮ ದ್ವಾರದ ಮುಂಭಾಗ ಇರುವ ಖಾಲಿ ಸ್ಥಳ ಸೇರಿದಂತೆ
* ಫೌಂಟೇನ್ ವೃತ್ತದಿಂದ ಮಿಲೇನಿಯಂ ವೃತ್ತದವರೆಗೆ
* ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬಿಎನ್ ರಸ್ತೆ ಜಂಕ್ಷನ್‌ನಿಂದ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‌ವರೆಗೆ.
* ಇಟ್ಟಿಗೆಗೂಡಿನ ಹೊಸ ಬೀದಿ ೫ನೇ ತಿರುವು ರಸ್ತೆಯಲ್ಲಿ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‌ನಿಂದ ವಸ್ತು ಪ್ರರ್ದಶನದ ಪೂರ್ವ ದ್ವಾರದವರೆಗೆ.
* ಮಾನಸರ ರಸ್ತೆಯಲ್ಲಿ ವಾಣಿ ವಿಲಾಸ ರಸ್ತೆ ಜಂಕ್ಷನ್ ನಿಂದ ಲೋಕರಂಜನ್ ಮಹಲ್ ರಸ್ತೆ ಜಂಕ್ಷನ್‌ವರೆಗೆ
* ಮಲೈಮಹದೇಶ್ವರ ರಸ್ತೆಯಲ್ಲಿ ಬಿ. ಎನ್. ರಸ್ತೆ ಜಂಕ್ಷನ್‌ನಿಂದ (ಛತ್ರಿಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ
* ಸರ್ಕಾರಿ ಭವನದ ರಸ್ತೆಯಲ್ಲಿ, ಸರ್ಕಾರಿ ಭವನದ ದಕ್ಷಿಣ ದ್ವಾರದ ಜಂಕ್ಷನ್‌ನಿಂದ ದಕ್ಷಿಣಕ್ಕೆ ಹಾರ್ಡಿಂಜ್ ವೃತ್ತದವರೆಗೆ.

* ಅ. 12ರಂದು ಬೆಳಿಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ದಸರಾ ಮೆರವಣಿಗೆಯು ಸಾಗುವ ಮಾರ್ಗದಲ್ಲಿ ಬಲರಾಮ ದ್ವಾರ ಎ. ವಿ. ರಸ್ತೆ, ಕೆ. ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಬಂಬೂಬಜಾರ್, ಹೈವೇ ಹೋಟೆಲ್ ವೃತ್ತ ನೆಲ್ಸನ್ ಮಂಡೇಲಾ ರಸ್ತೆ ಬನ್ನಿಮಂಟಪದ ಮುಖ್ಯದ್ವಾರ ಮಿಲೇನಿಯಂ ವೃತ್ತದವರೆಗೆ ಎಲ್ಲ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago