ವಿಶ್ವವಿಖ್ಯಾತ ಮೈಸೂರು ದಸರಾ ನಾಳೆಯಿಂದ ( ಅಕ್ಟೋಬರ್ 3 ) ಆರಂಭವಾಗುತ್ತಿದ್ದು, ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಮತ್ತು ದಸರಾ ಕಾರ್ಯಕ್ರಮಗಳು ಅಡ್ಡಿಯಿಲ್ಲದೇ ನಡೆಯಲು ಸಂಚಾರಿ ಮಾರ್ಗಗಳಲ್ಲಿ ಕೆಲ ಬದಲಾವಣೆಯನ್ನು ಮಾಡಿಕೊಂಡಿದೆ. ಅದರಂತೆ ವಾಹನ ನಿಲುಗಡೆ ವಿಷಯದಲ್ಲಿಯೂ ಸಹ ಕೆಲ ನಿಯಮಗಳನ್ನು ವಿಧಿಸಿದೆ.
ಪ್ರತಿ ದಿನ ಮಧ್ಯಾಹ್ನ 4ರಿಂದ ರಾತ್ರಿ 12ರವರೆಗೆ ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ
* ಎಸ್. ಆರ್. ರಸ್ತೆಯಲ್ಲಿ ಕೆ. ಆರ್. ವೃತ್ತದಿಂದ ಬಸವೇಶ್ವರ ವೃತ್ತದವರೆಗೆ
* ಪುರಂದರ ರಸ್ತೆಯಲ್ಲಿ ನಗರಪಾಲಿಕೆ ವೃತ್ತದಿಂದ ಬಿ. ಎನ್. ರಸ್ತೆ ಜಂಕ್ಷನ್ವರೆಗೆ
* ಬಿ. ಎನ್. ರಸ್ತೆಯಲ್ಲಿ ಜೆ. ಎಸ್. ಎಸ್. ವೃತ್ತದಿಂದ ಹಾರ್ಡಿಂಜ್ ವೃತ್ತದವರೆಗೆ
* ಎ. ವಿ. ರಸ್ತೆಯಲ್ಲಿ ಹಾರ್ಡಿಂಜ್ ವೃತ್ತದಿಂದ ಕೆ. ಆರ್. ವೃತ್ತದವರೆಗೆ
* ಅಶೋಕ ರಸ್ತೆಯಲ್ಲಿ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ ?
* ಅಶೋಕ ರಸ್ತೆಯಲ್ಲಿ ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ ಹಾಗೂ ಬಲರಾಮ ದ್ವಾರದ ಮುಂಭಾಗ ಇರುವ ಖಾಲಿ ಸ್ಥಳ ಸೇರಿದಂತೆ
* ಫೌಂಟೇನ್ ವೃತ್ತದಿಂದ ಮಿಲೇನಿಯಂ ವೃತ್ತದವರೆಗೆ
* ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬಿಎನ್ ರಸ್ತೆ ಜಂಕ್ಷನ್ನಿಂದ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್ವರೆಗೆ.
* ಇಟ್ಟಿಗೆಗೂಡಿನ ಹೊಸ ಬೀದಿ ೫ನೇ ತಿರುವು ರಸ್ತೆಯಲ್ಲಿ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್ನಿಂದ ವಸ್ತು ಪ್ರರ್ದಶನದ ಪೂರ್ವ ದ್ವಾರದವರೆಗೆ.
* ಮಾನಸರ ರಸ್ತೆಯಲ್ಲಿ ವಾಣಿ ವಿಲಾಸ ರಸ್ತೆ ಜಂಕ್ಷನ್ ನಿಂದ ಲೋಕರಂಜನ್ ಮಹಲ್ ರಸ್ತೆ ಜಂಕ್ಷನ್ವರೆಗೆ
* ಮಲೈಮಹದೇಶ್ವರ ರಸ್ತೆಯಲ್ಲಿ ಬಿ. ಎನ್. ರಸ್ತೆ ಜಂಕ್ಷನ್ನಿಂದ (ಛತ್ರಿಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ
* ಸರ್ಕಾರಿ ಭವನದ ರಸ್ತೆಯಲ್ಲಿ, ಸರ್ಕಾರಿ ಭವನದ ದಕ್ಷಿಣ ದ್ವಾರದ ಜಂಕ್ಷನ್ನಿಂದ ದಕ್ಷಿಣಕ್ಕೆ ಹಾರ್ಡಿಂಜ್ ವೃತ್ತದವರೆಗೆ.
* ಅ. 12ರಂದು ಬೆಳಿಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ದಸರಾ ಮೆರವಣಿಗೆಯು ಸಾಗುವ ಮಾರ್ಗದಲ್ಲಿ ಬಲರಾಮ ದ್ವಾರ ಎ. ವಿ. ರಸ್ತೆ, ಕೆ. ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಬಂಬೂಬಜಾರ್, ಹೈವೇ ಹೋಟೆಲ್ ವೃತ್ತ ನೆಲ್ಸನ್ ಮಂಡೇಲಾ ರಸ್ತೆ ಬನ್ನಿಮಂಟಪದ ಮುಖ್ಯದ್ವಾರ ಮಿಲೇನಿಯಂ ವೃತ್ತದವರೆಗೆ ಎಲ್ಲ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…