ನಮ್ಮ ಮೈಸೂರ ದಸರಾ 2024

ನಮ್ಮ ಮೈಸೂರ ದಸರಾ 2024: ಈ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡಬೇಡಿ

ವಿಶ್ವವಿಖ್ಯಾತ ಮೈಸೂರು ದಸರಾ ನಾಳೆಯಿಂದ ( ಅಕ್ಟೋಬರ್‌ 3 ) ಆರಂಭವಾಗುತ್ತಿದ್ದು, ಪೊಲೀಸ್‌ ಇಲಾಖೆ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಮತ್ತು ದಸರಾ ಕಾರ್ಯಕ್ರಮಗಳು ಅಡ್ಡಿಯಿಲ್ಲದೇ ನಡೆಯಲು ಸಂಚಾರಿ ಮಾರ್ಗಗಳಲ್ಲಿ ಕೆಲ ಬದಲಾವಣೆಯನ್ನು ಮಾಡಿಕೊಂಡಿದೆ. ಅದರಂತೆ ವಾಹನ ನಿಲುಗಡೆ ವಿಷಯದಲ್ಲಿಯೂ ಸಹ ಕೆಲ ನಿಯಮಗಳನ್ನು ವಿಧಿಸಿದೆ.

ಪ್ರತಿ ದಿನ ಮಧ್ಯಾಹ್ನ 4ರಿಂದ ರಾತ್ರಿ 12ರವರೆಗೆ ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ

* ಎಸ್. ಆರ್. ರಸ್ತೆಯಲ್ಲಿ ಕೆ. ಆರ್. ವೃತ್ತದಿಂದ ಬಸವೇಶ್ವರ ವೃತ್ತದವರೆಗೆ
* ಪುರಂದರ ರಸ್ತೆಯಲ್ಲಿ ನಗರಪಾಲಿಕೆ ವೃತ್ತದಿಂದ ಬಿ. ಎನ್. ರಸ್ತೆ ಜಂಕ್ಷನ್‌ವರೆಗೆ
* ಬಿ. ಎನ್. ರಸ್ತೆಯಲ್ಲಿ ಜೆ. ಎಸ್. ಎಸ್. ವೃತ್ತದಿಂದ ಹಾರ್ಡಿಂಜ್ ವೃತ್ತದವರೆಗೆ
* ಎ. ವಿ. ರಸ್ತೆಯಲ್ಲಿ ಹಾರ್ಡಿಂಜ್ ವೃತ್ತದಿಂದ ಕೆ. ಆರ್. ವೃತ್ತದವರೆಗೆ
* ಅಶೋಕ ರಸ್ತೆಯಲ್ಲಿ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ ?
* ಅಶೋಕ ರಸ್ತೆಯಲ್ಲಿ ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ ಹಾಗೂ ಬಲರಾಮ ದ್ವಾರದ ಮುಂಭಾಗ ಇರುವ ಖಾಲಿ ಸ್ಥಳ ಸೇರಿದಂತೆ
* ಫೌಂಟೇನ್ ವೃತ್ತದಿಂದ ಮಿಲೇನಿಯಂ ವೃತ್ತದವರೆಗೆ
* ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬಿಎನ್ ರಸ್ತೆ ಜಂಕ್ಷನ್‌ನಿಂದ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‌ವರೆಗೆ.
* ಇಟ್ಟಿಗೆಗೂಡಿನ ಹೊಸ ಬೀದಿ ೫ನೇ ತಿರುವು ರಸ್ತೆಯಲ್ಲಿ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‌ನಿಂದ ವಸ್ತು ಪ್ರರ್ದಶನದ ಪೂರ್ವ ದ್ವಾರದವರೆಗೆ.
* ಮಾನಸರ ರಸ್ತೆಯಲ್ಲಿ ವಾಣಿ ವಿಲಾಸ ರಸ್ತೆ ಜಂಕ್ಷನ್ ನಿಂದ ಲೋಕರಂಜನ್ ಮಹಲ್ ರಸ್ತೆ ಜಂಕ್ಷನ್‌ವರೆಗೆ
* ಮಲೈಮಹದೇಶ್ವರ ರಸ್ತೆಯಲ್ಲಿ ಬಿ. ಎನ್. ರಸ್ತೆ ಜಂಕ್ಷನ್‌ನಿಂದ (ಛತ್ರಿಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ
* ಸರ್ಕಾರಿ ಭವನದ ರಸ್ತೆಯಲ್ಲಿ, ಸರ್ಕಾರಿ ಭವನದ ದಕ್ಷಿಣ ದ್ವಾರದ ಜಂಕ್ಷನ್‌ನಿಂದ ದಕ್ಷಿಣಕ್ಕೆ ಹಾರ್ಡಿಂಜ್ ವೃತ್ತದವರೆಗೆ.

* ಅ. 12ರಂದು ಬೆಳಿಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ದಸರಾ ಮೆರವಣಿಗೆಯು ಸಾಗುವ ಮಾರ್ಗದಲ್ಲಿ ಬಲರಾಮ ದ್ವಾರ ಎ. ವಿ. ರಸ್ತೆ, ಕೆ. ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಬಂಬೂಬಜಾರ್, ಹೈವೇ ಹೋಟೆಲ್ ವೃತ್ತ ನೆಲ್ಸನ್ ಮಂಡೇಲಾ ರಸ್ತೆ ಬನ್ನಿಮಂಟಪದ ಮುಖ್ಯದ್ವಾರ ಮಿಲೇನಿಯಂ ವೃತ್ತದವರೆಗೆ ಎಲ್ಲ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

10 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

10 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

10 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

10 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

10 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

10 hours ago