ನಮ್ಮ ಮೈಸೂರ ದಸರಾ 2024

Mysore Dasara 2024: ಯುವ ದಸರಾಗೆ ಚಾಲನೆ

ಮೈಸೂರು: ನಗರದಾದ್ಯಂತ ದಸರಾ ಸಂಭ್ರಮ ಕಳೆಗಟ್ಟಿದ್ದು, ಇಂದು ( ಅಕ್ಟೋಬರ್‌ 6 ) ಜನಪ್ರಿಯ ಯುವ ದಸರಾಗೆ ವಿದ್ಯುಕ್ತ ಚಾಲನೆ ದೊರಕಿದೆ.

ನಗರದ ಹೊರ ವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಹಚ್ಚೇವು ಕನ್ನಡದ ದೀಪ ಹಾಡು ಹಾಡಿ, ದೀಪ ಬೆಳಗಿಸಿ, ಸಂವಿಧಾನ ಪೀಠಿಕೆ ಓದುವ ಮೂಲಕ ಚಾಲನೆ ನೀಡಲಾಯಿತು. ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಯುವ ದಸರಾವನ್ನು ಉದ್ಘಾಟಿಸಿ ನೆರೆದಿದ್ದ ಪ್ರೇಕ್ಷಕರಿಗೆ ಹಾಗೂ ನಾಡಿನ ಜನತೆಗೆ ನಾಡಹಬ್ಬ ದಸರೆಯ ಶುಭಾಶಯ ಕೋರಿದರು.

ಒಲಿದು ಬಾರೇ ಚಾಮುಂಡಿ ಒಲಿದು ಬಾರೇ ಬೆಟ್ಟದ ಚಾಮುಂಡಿ ಒಲಿದು ಬಾರೇ ಎಂಬ ಹಾಡಿನ ಮೂಲಕ ಚಾಮುಂಡೇಶ್ವರಿ ಪ್ರಾರ್ಥಿಸಲಾಯಿತು. ಬಣ್ಣ ಬಣ್ಣದ ಲೈಟ್‌ಗಳಿಂದ ಅಲಂಕೃತಗೊಂಡಿರುವ ಬೃಹತ್‌ ವೇದಿಕೆ ಎಲ್ಲರ ಗಮನ ಸೆಳೆಯಿತು.

ಯುವ ದಸರಾಗೆ ಚಾಲನೆ‌ ನೀಡಿದ ಬಳಿಕ ಜಿಲ್ಲಾ ಉಸ್ತುವರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ ಮೈಸೂರಿನ ಸಾಂಸ್ಕೃತಿಕ ಎತ್ತಿಹಿಡಿಯಲು ನಿಟ್ಟಿನಲ್ಲಿ ವಿಶಾಲವಾದ ವೇದಿಕೆಯಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿದೆ. ಮಹಿಳೆಯರ ರಕ್ಷಣೆಗೆ ಒತ್ತು ನೀಡಲಾಗಿದ್ದು, ಪುರುಷರು ಅವರಿಗೆ ಗೌರವದಿಂದ ನಡೆದುಕೊಳ್ಳಬೇಕು. ಇಂದಿನಿಂದ ನಡೆಯುವ ಯುವ ದಸರೆಯಲ್ಲಿ ಪ್ರಜಾಸತ್ತಾತ್ಮಕ ನಡವಳಿಕೆ ಅಳವಡಿಸಿಕೊಳ್ಳುವ ನಿಟ್ಟಿನ ಕಾರ್ಯಕ್ರಮ ನಡೆಯಲಿದೆ. ಮೈಸೂರು ಪ್ರೀತಿ-ಪ್ರೇಮ, ಔದಾರ್ಯಕ್ಕೆ ಹೆಸರು ವಾಸಿಯಾಗಿದ್ದು, ಈ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಬೆಟ್ಟದ‌‌ ಮೇಲೆ ಚಾಮುಂಡಿ, ಇಲ್ಲಿ ಉತ್ತನಹಳ್ಳಿ ಮಾರಮ್ಮ, ಅಕ್ಕ-ತಂಗಿಯರ ಸಮ್ಮುಖದಲ್ಲಿ ಯುವ ದಸರಾ ಉದ್ಘಾಟನೆಗೊಂಡಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ನಾಗರೀಕರ ಮೇಲಿದೆ. ಅಕ್ಕ-ಪಕ್ಕದಲ್ಲಿನ ಜನತೆ ಸಹಕಾರ ನೀಡಬೇಕು.‌ ವಿದ್ಯಾರ್ಥಿಗಳು, ಯುವ ಸಮೂಹ ಮೈಸೂರಿನ ಗೌರವ ಉಳಿಸುವ ನಿಟ್ಟಿನಲ್ಲಿ ವರ್ತಿಸಬೇಕು. ಪೊಲೀಸರು ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

andolana

Recent Posts

‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ

65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್‌ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…

15 mins ago

ಏಳೆಂಟು ವರ್ಷ ಹಿಂದೆಯೇ ಎಚ್‌ ಪಿವಿ ಲಸಿಕೆ ಆರಂಭಿಸಿದ ವೈದ್ಯ!

ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾ‌ರ್‌ ಮಂಡ್ಯ :  ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…

24 mins ago

ಕಾಳು ಮೆಣಸು ಕಳ್ಳತನ; ಆರೋಪಿಗಳ ಬಂಧನ

ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…

34 mins ago

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

2 hours ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

2 hours ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago