ನಮ್ಮ ಮೈಸೂರ ದಸರಾ 2024

Mysore Dasara 2024: ಯುವ ದಸರಾಗೆ ಚಾಲನೆ

ಮೈಸೂರು: ನಗರದಾದ್ಯಂತ ದಸರಾ ಸಂಭ್ರಮ ಕಳೆಗಟ್ಟಿದ್ದು, ಇಂದು ( ಅಕ್ಟೋಬರ್‌ 6 ) ಜನಪ್ರಿಯ ಯುವ ದಸರಾಗೆ ವಿದ್ಯುಕ್ತ ಚಾಲನೆ ದೊರಕಿದೆ.

ನಗರದ ಹೊರ ವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಹಚ್ಚೇವು ಕನ್ನಡದ ದೀಪ ಹಾಡು ಹಾಡಿ, ದೀಪ ಬೆಳಗಿಸಿ, ಸಂವಿಧಾನ ಪೀಠಿಕೆ ಓದುವ ಮೂಲಕ ಚಾಲನೆ ನೀಡಲಾಯಿತು. ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಯುವ ದಸರಾವನ್ನು ಉದ್ಘಾಟಿಸಿ ನೆರೆದಿದ್ದ ಪ್ರೇಕ್ಷಕರಿಗೆ ಹಾಗೂ ನಾಡಿನ ಜನತೆಗೆ ನಾಡಹಬ್ಬ ದಸರೆಯ ಶುಭಾಶಯ ಕೋರಿದರು.

ಒಲಿದು ಬಾರೇ ಚಾಮುಂಡಿ ಒಲಿದು ಬಾರೇ ಬೆಟ್ಟದ ಚಾಮುಂಡಿ ಒಲಿದು ಬಾರೇ ಎಂಬ ಹಾಡಿನ ಮೂಲಕ ಚಾಮುಂಡೇಶ್ವರಿ ಪ್ರಾರ್ಥಿಸಲಾಯಿತು. ಬಣ್ಣ ಬಣ್ಣದ ಲೈಟ್‌ಗಳಿಂದ ಅಲಂಕೃತಗೊಂಡಿರುವ ಬೃಹತ್‌ ವೇದಿಕೆ ಎಲ್ಲರ ಗಮನ ಸೆಳೆಯಿತು.

ಯುವ ದಸರಾಗೆ ಚಾಲನೆ‌ ನೀಡಿದ ಬಳಿಕ ಜಿಲ್ಲಾ ಉಸ್ತುವರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ ಮೈಸೂರಿನ ಸಾಂಸ್ಕೃತಿಕ ಎತ್ತಿಹಿಡಿಯಲು ನಿಟ್ಟಿನಲ್ಲಿ ವಿಶಾಲವಾದ ವೇದಿಕೆಯಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿದೆ. ಮಹಿಳೆಯರ ರಕ್ಷಣೆಗೆ ಒತ್ತು ನೀಡಲಾಗಿದ್ದು, ಪುರುಷರು ಅವರಿಗೆ ಗೌರವದಿಂದ ನಡೆದುಕೊಳ್ಳಬೇಕು. ಇಂದಿನಿಂದ ನಡೆಯುವ ಯುವ ದಸರೆಯಲ್ಲಿ ಪ್ರಜಾಸತ್ತಾತ್ಮಕ ನಡವಳಿಕೆ ಅಳವಡಿಸಿಕೊಳ್ಳುವ ನಿಟ್ಟಿನ ಕಾರ್ಯಕ್ರಮ ನಡೆಯಲಿದೆ. ಮೈಸೂರು ಪ್ರೀತಿ-ಪ್ರೇಮ, ಔದಾರ್ಯಕ್ಕೆ ಹೆಸರು ವಾಸಿಯಾಗಿದ್ದು, ಈ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಬೆಟ್ಟದ‌‌ ಮೇಲೆ ಚಾಮುಂಡಿ, ಇಲ್ಲಿ ಉತ್ತನಹಳ್ಳಿ ಮಾರಮ್ಮ, ಅಕ್ಕ-ತಂಗಿಯರ ಸಮ್ಮುಖದಲ್ಲಿ ಯುವ ದಸರಾ ಉದ್ಘಾಟನೆಗೊಂಡಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ನಾಗರೀಕರ ಮೇಲಿದೆ. ಅಕ್ಕ-ಪಕ್ಕದಲ್ಲಿನ ಜನತೆ ಸಹಕಾರ ನೀಡಬೇಕು.‌ ವಿದ್ಯಾರ್ಥಿಗಳು, ಯುವ ಸಮೂಹ ಮೈಸೂರಿನ ಗೌರವ ಉಳಿಸುವ ನಿಟ್ಟಿನಲ್ಲಿ ವರ್ತಿಸಬೇಕು. ಪೊಲೀಸರು ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

andolana

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

7 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

7 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

8 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

8 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

8 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

8 hours ago