ನಮ್ಮ ಮೈಸೂರ ದಸರಾ 2024

Mysore Dasara 2024: ಯುವ ದಸರಾಗೆ ಚಾಲನೆ

ಮೈಸೂರು: ನಗರದಾದ್ಯಂತ ದಸರಾ ಸಂಭ್ರಮ ಕಳೆಗಟ್ಟಿದ್ದು, ಇಂದು ( ಅಕ್ಟೋಬರ್‌ 6 ) ಜನಪ್ರಿಯ ಯುವ ದಸರಾಗೆ ವಿದ್ಯುಕ್ತ ಚಾಲನೆ ದೊರಕಿದೆ.

ನಗರದ ಹೊರ ವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಹಚ್ಚೇವು ಕನ್ನಡದ ದೀಪ ಹಾಡು ಹಾಡಿ, ದೀಪ ಬೆಳಗಿಸಿ, ಸಂವಿಧಾನ ಪೀಠಿಕೆ ಓದುವ ಮೂಲಕ ಚಾಲನೆ ನೀಡಲಾಯಿತು. ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಯುವ ದಸರಾವನ್ನು ಉದ್ಘಾಟಿಸಿ ನೆರೆದಿದ್ದ ಪ್ರೇಕ್ಷಕರಿಗೆ ಹಾಗೂ ನಾಡಿನ ಜನತೆಗೆ ನಾಡಹಬ್ಬ ದಸರೆಯ ಶುಭಾಶಯ ಕೋರಿದರು.

ಒಲಿದು ಬಾರೇ ಚಾಮುಂಡಿ ಒಲಿದು ಬಾರೇ ಬೆಟ್ಟದ ಚಾಮುಂಡಿ ಒಲಿದು ಬಾರೇ ಎಂಬ ಹಾಡಿನ ಮೂಲಕ ಚಾಮುಂಡೇಶ್ವರಿ ಪ್ರಾರ್ಥಿಸಲಾಯಿತು. ಬಣ್ಣ ಬಣ್ಣದ ಲೈಟ್‌ಗಳಿಂದ ಅಲಂಕೃತಗೊಂಡಿರುವ ಬೃಹತ್‌ ವೇದಿಕೆ ಎಲ್ಲರ ಗಮನ ಸೆಳೆಯಿತು.

ಯುವ ದಸರಾಗೆ ಚಾಲನೆ‌ ನೀಡಿದ ಬಳಿಕ ಜಿಲ್ಲಾ ಉಸ್ತುವರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ ಮೈಸೂರಿನ ಸಾಂಸ್ಕೃತಿಕ ಎತ್ತಿಹಿಡಿಯಲು ನಿಟ್ಟಿನಲ್ಲಿ ವಿಶಾಲವಾದ ವೇದಿಕೆಯಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿದೆ. ಮಹಿಳೆಯರ ರಕ್ಷಣೆಗೆ ಒತ್ತು ನೀಡಲಾಗಿದ್ದು, ಪುರುಷರು ಅವರಿಗೆ ಗೌರವದಿಂದ ನಡೆದುಕೊಳ್ಳಬೇಕು. ಇಂದಿನಿಂದ ನಡೆಯುವ ಯುವ ದಸರೆಯಲ್ಲಿ ಪ್ರಜಾಸತ್ತಾತ್ಮಕ ನಡವಳಿಕೆ ಅಳವಡಿಸಿಕೊಳ್ಳುವ ನಿಟ್ಟಿನ ಕಾರ್ಯಕ್ರಮ ನಡೆಯಲಿದೆ. ಮೈಸೂರು ಪ್ರೀತಿ-ಪ್ರೇಮ, ಔದಾರ್ಯಕ್ಕೆ ಹೆಸರು ವಾಸಿಯಾಗಿದ್ದು, ಈ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಬೆಟ್ಟದ‌‌ ಮೇಲೆ ಚಾಮುಂಡಿ, ಇಲ್ಲಿ ಉತ್ತನಹಳ್ಳಿ ಮಾರಮ್ಮ, ಅಕ್ಕ-ತಂಗಿಯರ ಸಮ್ಮುಖದಲ್ಲಿ ಯುವ ದಸರಾ ಉದ್ಘಾಟನೆಗೊಂಡಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ನಾಗರೀಕರ ಮೇಲಿದೆ. ಅಕ್ಕ-ಪಕ್ಕದಲ್ಲಿನ ಜನತೆ ಸಹಕಾರ ನೀಡಬೇಕು.‌ ವಿದ್ಯಾರ್ಥಿಗಳು, ಯುವ ಸಮೂಹ ಮೈಸೂರಿನ ಗೌರವ ಉಳಿಸುವ ನಿಟ್ಟಿನಲ್ಲಿ ವರ್ತಿಸಬೇಕು. ಪೊಲೀಸರು ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

56 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago