ಮೈಸೂರು: ಮಲ್ಲಿಗೆ ನಗರಿ ಹಾಗೂ ಸಾಂಸ್ಕೃತಿಕ ನಗರಿ ಎಂದೇ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಬಳಿಕ ಅರಮನೆಯಿಂದ ರಾಜಬೀದಿಯಲ್ಲಿ ತಾಯಿ ಚಾಮುಂಡೇಶ್ವರಿ ಆಸೀನಳಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಗಜ ಗಾಂಭೀರ್ಯದ ಹೆಜ್ಜೆ ಹಾಕುತ್ತಿದ್ದಾನೆ.
5ನೇ ಬಾರಿಗೆ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಸಾಗುತ್ತಿದ್ದು, ಇತರೆ ಆನೆಗಳು ಅಭಿಮನ್ಯುವಿಗೆ ಸಾಥ್ ನೀಡಿವೆ.
ಕುಮ್ಕಿ ಆನೆಗಳಾಗಿ ಹಿರಣ್ಯ ಹಾಗೂ ಲಕ್ಷ್ಮೀ, ನಿಶಾನೆಯಾಗಿ ಧನಂಜಯ, ಸಾಲಾನೆಗಳಾಗಿ ಗೋಪಿ, ಏಕಲವ್ಯ, ಪ್ರಶಾಂತ, ಮಹೇಂದ್ರ, ಸುಗ್ರೀವ, ಏಕಲವ್ಯ, ಕಂಜನ್ ಹಾಗೂ ಭೀಮ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಂಡಿವೆ.
ರಾಜಬೀದಿಗಳಲ್ಲಿ ಜಂಬೂಸವಾರಿ ಮೆರವಣಿಗೆಯನ್ನು ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದು, ಜಿಟಿ ಜಿಟಿ ಮಳೆಯ ನಡುವೆಯೂ ಜನರು ಜಂಬೂಸವಾರಿ ಮೆರವಣಿಗೆಯನ್ನು ನೋಡಿ ಖುಷಿಪಟ್ಟಿದ್ದಾರೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…