ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ ಸಾಂಸ್ಕೃತಿಕ ಶ್ರೀಮಂತಿಕೆಯ ಮೈಸೂರು ದಸರಾ ವಿಜೃಂಭಣೆಯಿಂದ ಜರುಗುತ್ತಿದೆ. ಕ್ಯಾಪ್ಟನ್ ಅಭಿಮನ್ಯು ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ದಸರಾದಲ್ಲಿ ಹೆಜ್ಜೆ ಹಾಕಲಿದ್ದಾನೆ. ಆದರೆ, ಸತತ ಐದನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಧೈರ್ಯ ತುಂಬಿದ್ದೆ ಅರ್ಜುನ ಆನೆ.
ಆದರೆ, ಅರ್ಜುನ ಇಂದು ನಮ್ಮೊಂದಿಗಿಲ್ಲ. ಕಳೆದ ವರ್ಷ ಕಾಡಾನೆ ಸೆರೆ ಹಿಡಿಯುವ ಕಾರ್ಯಚರಣೆಯಲ್ಲಿ ಅರ್ಜುನ ಸಾವನ್ನಪ್ಪಿದ್ದಾನೆ. ಆದರೆ, ಅರ್ಜುನನ ನೆನಪು ಮಾತ್ರ ಮಾಸದೆ ಹಾಗೆಯೇ ಉಳಿದಿದೆ. ದಸರಾದಲ್ಲಿ ಅರ್ಜುನನ ಹೆಜ್ಜೆಯನ್ನು ಕಂಡವರು ಇಂದಿಗೂ ನೆನಪಿಸಿಕೊಳ್ಳುತ್ತಾರೆ.
ಇಂದು ಅಂಬಾರಿ ಹೊರುತ್ತಿರುವ ಅಭಿಮನ್ಯು ಸಹ ಅರ್ಜುನನಿಂದ ಹಲವು ವಿಚಾರಗಳನ್ನು ಕಲಿತ್ತಿದ್ದಾನೆ. ಆತ ಜೊತೆಗಿದ್ದಾಗ ಅಭಿಮನ್ಯುಗೆ ಹೇಳಿಕೊಟ್ಟ ಧೈರ್ಯದ ಪಾಠವೇ ಇಂದು ಸಂಭ್ರಮ ಮತ್ತು ಸುಸೂತ್ರದ ದಸರೆಯಾಗಿದೆ. ಹೀಗಾಗಿ ಅರ್ಜುನನ್ನು ಇಂದು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಿದೆ.
ಅರ್ಜುನನ ಹಿನ್ನೆಲೆ…..
1968ರಲ್ಲಿ ಕಾಕನಕೋಟೆಯ ಕಾರ್ಯಚರಣೆಯಲ್ಲಿ ಸೆರೆಸಿಕ್ಕಿದ್ದ ಅರ್ಜುನ ಆನೆಯನ್ನು ಮಾವುತರು ಚೆನ್ನಾಗಿ ಪಳಗಿಸಿ ನಂತರ 1990ರಲ್ಲಿ ಮೈಸೂರಿನ ದಸರಾ ಉತ್ಸವದ ಶಿಬಿರಕ್ಕೆ ಕರೆತರಲಾಗಿತ್ತು. ಬಲರಾಮ ಆನೆ ಬಳಿಕ ಅರ್ಜುನನೇ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದ. ಅರ್ಜುನನು 6040ಕೆಜಿ ತೂಕ, 2.95ಮೀಟರ್ ಉದ್ದ ಇದ್ದ. ಸತತ 22ವರ್ಷದಿಂದ ನಾಡಹಬ್ಬ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ. ಅರ್ಜುನ ಸಾವನ್ನಪ್ಪಿವಾಗ ಆತನಿಗೆ 63ವರ್ಷ ವಯಸ್ಸಾಗಿತ್ತು..
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…