ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ ಸಾಂಸ್ಕೃತಿಕ ಶ್ರೀಮಂತಿಕೆಯ ಮೈಸೂರು ದಸರಾ ವಿಜೃಂಭಣೆಯಿಂದ ಜರುಗುತ್ತಿದೆ. ಕ್ಯಾಪ್ಟನ್ ಅಭಿಮನ್ಯು ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ದಸರಾದಲ್ಲಿ ಹೆಜ್ಜೆ ಹಾಕಲಿದ್ದಾನೆ. ಆದರೆ, ಸತತ ಐದನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಧೈರ್ಯ ತುಂಬಿದ್ದೆ ಅರ್ಜುನ ಆನೆ.
ಆದರೆ, ಅರ್ಜುನ ಇಂದು ನಮ್ಮೊಂದಿಗಿಲ್ಲ. ಕಳೆದ ವರ್ಷ ಕಾಡಾನೆ ಸೆರೆ ಹಿಡಿಯುವ ಕಾರ್ಯಚರಣೆಯಲ್ಲಿ ಅರ್ಜುನ ಸಾವನ್ನಪ್ಪಿದ್ದಾನೆ. ಆದರೆ, ಅರ್ಜುನನ ನೆನಪು ಮಾತ್ರ ಮಾಸದೆ ಹಾಗೆಯೇ ಉಳಿದಿದೆ. ದಸರಾದಲ್ಲಿ ಅರ್ಜುನನ ಹೆಜ್ಜೆಯನ್ನು ಕಂಡವರು ಇಂದಿಗೂ ನೆನಪಿಸಿಕೊಳ್ಳುತ್ತಾರೆ.
ಇಂದು ಅಂಬಾರಿ ಹೊರುತ್ತಿರುವ ಅಭಿಮನ್ಯು ಸಹ ಅರ್ಜುನನಿಂದ ಹಲವು ವಿಚಾರಗಳನ್ನು ಕಲಿತ್ತಿದ್ದಾನೆ. ಆತ ಜೊತೆಗಿದ್ದಾಗ ಅಭಿಮನ್ಯುಗೆ ಹೇಳಿಕೊಟ್ಟ ಧೈರ್ಯದ ಪಾಠವೇ ಇಂದು ಸಂಭ್ರಮ ಮತ್ತು ಸುಸೂತ್ರದ ದಸರೆಯಾಗಿದೆ. ಹೀಗಾಗಿ ಅರ್ಜುನನ್ನು ಇಂದು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಿದೆ.
ಅರ್ಜುನನ ಹಿನ್ನೆಲೆ…..
1968ರಲ್ಲಿ ಕಾಕನಕೋಟೆಯ ಕಾರ್ಯಚರಣೆಯಲ್ಲಿ ಸೆರೆಸಿಕ್ಕಿದ್ದ ಅರ್ಜುನ ಆನೆಯನ್ನು ಮಾವುತರು ಚೆನ್ನಾಗಿ ಪಳಗಿಸಿ ನಂತರ 1990ರಲ್ಲಿ ಮೈಸೂರಿನ ದಸರಾ ಉತ್ಸವದ ಶಿಬಿರಕ್ಕೆ ಕರೆತರಲಾಗಿತ್ತು. ಬಲರಾಮ ಆನೆ ಬಳಿಕ ಅರ್ಜುನನೇ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದ. ಅರ್ಜುನನು 6040ಕೆಜಿ ತೂಕ, 2.95ಮೀಟರ್ ಉದ್ದ ಇದ್ದ. ಸತತ 22ವರ್ಷದಿಂದ ನಾಡಹಬ್ಬ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ. ಅರ್ಜುನ ಸಾವನ್ನಪ್ಪಿವಾಗ ಆತನಿಗೆ 63ವರ್ಷ ವಯಸ್ಸಾಗಿತ್ತು..
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…
ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್ವೊಂದು…
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…