ನಮ್ಮ ಮೈಸೂರ ದಸರಾ 2024

ಮೈಸೂರು ದಸರಾ: ಜಂಬೂ ಸವಾರಿಯಲ್ಲಿ ಕಾಡಲಿದೆ ಅರ್ಜುನನ ಅನುಪಸ್ಥಿತಿ

ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ ಸಾಂಸ್ಕೃತಿಕ ಶ್ರೀಮಂತಿಕೆಯ ಮೈಸೂರು ದಸರಾ ವಿಜೃಂಭಣೆಯಿಂದ ಜರುಗುತ್ತಿದೆ. ಕ್ಯಾಪ್ಟನ್‌ ಅಭಿಮನ್ಯು ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ದಸರಾದಲ್ಲಿ ಹೆಜ್ಜೆ ಹಾಕಲಿದ್ದಾನೆ. ಆದರೆ, ಸತತ ಐದನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಧೈರ್ಯ ತುಂಬಿದ್ದೆ ಅರ್ಜುನ ಆನೆ.

ಆದರೆ, ಅರ್ಜುನ ಇಂದು ನಮ್ಮೊಂದಿಗಿಲ್ಲ. ಕಳೆದ ವರ್ಷ ಕಾಡಾನೆ ಸೆರೆ ಹಿಡಿಯುವ ಕಾರ್ಯಚರಣೆಯಲ್ಲಿ ಅರ್ಜುನ ಸಾವನ್ನಪ್ಪಿದ್ದಾನೆ. ಆದರೆ, ಅರ್ಜುನನ ನೆನಪು ಮಾತ್ರ ಮಾಸದೆ ಹಾಗೆಯೇ ಉಳಿದಿದೆ. ದಸರಾದಲ್ಲಿ ಅರ್ಜುನನ ಹೆಜ್ಜೆಯನ್ನು ಕಂಡವರು ಇಂದಿಗೂ ನೆನಪಿಸಿಕೊಳ್ಳುತ್ತಾರೆ.

ಇಂದು ಅಂಬಾರಿ ಹೊರುತ್ತಿರುವ ಅಭಿಮನ್ಯು ಸಹ ಅರ್ಜುನನಿಂದ ಹಲವು ವಿಚಾರಗಳನ್ನು ಕಲಿತ್ತಿದ್ದಾನೆ. ಆತ ಜೊತೆಗಿದ್ದಾಗ ಅಭಿಮನ್ಯುಗೆ ಹೇಳಿಕೊಟ್ಟ ಧೈರ್ಯದ ಪಾಠವೇ ಇಂದು ಸಂಭ್ರಮ ಮತ್ತು ಸುಸೂತ್ರದ ದಸರೆಯಾಗಿದೆ. ಹೀಗಾಗಿ ಅರ್ಜುನನ್ನು ಇಂದು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಿದೆ.

ಅರ್ಜುನನ ಹಿನ್ನೆಲೆ…..
1968ರಲ್ಲಿ ಕಾಕನಕೋಟೆಯ ಕಾರ್ಯಚರಣೆಯಲ್ಲಿ ಸೆರೆಸಿಕ್ಕಿದ್ದ ಅರ್ಜುನ ಆನೆಯನ್ನು ಮಾವುತರು ಚೆನ್ನಾಗಿ ಪಳಗಿಸಿ ನಂತರ 1990ರಲ್ಲಿ ಮೈಸೂರಿನ ದಸರಾ ಉತ್ಸವದ ಶಿಬಿರಕ್ಕೆ ಕರೆತರಲಾಗಿತ್ತು. ಬಲರಾಮ ಆನೆ ಬಳಿಕ ಅರ್ಜುನನೇ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದ. ಅರ್ಜುನನು 6040ಕೆಜಿ ತೂಕ, 2.95ಮೀಟರ್‌ ಉದ್ದ ಇದ್ದ. ಸತತ 22ವರ್ಷದಿಂದ ನಾಡಹಬ್ಬ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ. ಅರ್ಜುನ ಸಾವನ್ನಪ್ಪಿವಾಗ ಆತನಿಗೆ 63ವರ್ಷ ವಯಸ್ಸಾಗಿತ್ತು..

 

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

2 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

3 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

4 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

6 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

6 hours ago