ನಮ್ಮ ಮೈಸೂರ ದಸರಾ 2024

ಮೈಸೂರು ದಸರಾ: ಜಂಬೂ ಸವಾರಿಯಲ್ಲಿ ಕಾಡಲಿದೆ ಅರ್ಜುನನ ಅನುಪಸ್ಥಿತಿ

ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ ಸಾಂಸ್ಕೃತಿಕ ಶ್ರೀಮಂತಿಕೆಯ ಮೈಸೂರು ದಸರಾ ವಿಜೃಂಭಣೆಯಿಂದ ಜರುಗುತ್ತಿದೆ. ಕ್ಯಾಪ್ಟನ್‌ ಅಭಿಮನ್ಯು ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ದಸರಾದಲ್ಲಿ ಹೆಜ್ಜೆ ಹಾಕಲಿದ್ದಾನೆ. ಆದರೆ, ಸತತ ಐದನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಧೈರ್ಯ ತುಂಬಿದ್ದೆ ಅರ್ಜುನ ಆನೆ.

ಆದರೆ, ಅರ್ಜುನ ಇಂದು ನಮ್ಮೊಂದಿಗಿಲ್ಲ. ಕಳೆದ ವರ್ಷ ಕಾಡಾನೆ ಸೆರೆ ಹಿಡಿಯುವ ಕಾರ್ಯಚರಣೆಯಲ್ಲಿ ಅರ್ಜುನ ಸಾವನ್ನಪ್ಪಿದ್ದಾನೆ. ಆದರೆ, ಅರ್ಜುನನ ನೆನಪು ಮಾತ್ರ ಮಾಸದೆ ಹಾಗೆಯೇ ಉಳಿದಿದೆ. ದಸರಾದಲ್ಲಿ ಅರ್ಜುನನ ಹೆಜ್ಜೆಯನ್ನು ಕಂಡವರು ಇಂದಿಗೂ ನೆನಪಿಸಿಕೊಳ್ಳುತ್ತಾರೆ.

ಇಂದು ಅಂಬಾರಿ ಹೊರುತ್ತಿರುವ ಅಭಿಮನ್ಯು ಸಹ ಅರ್ಜುನನಿಂದ ಹಲವು ವಿಚಾರಗಳನ್ನು ಕಲಿತ್ತಿದ್ದಾನೆ. ಆತ ಜೊತೆಗಿದ್ದಾಗ ಅಭಿಮನ್ಯುಗೆ ಹೇಳಿಕೊಟ್ಟ ಧೈರ್ಯದ ಪಾಠವೇ ಇಂದು ಸಂಭ್ರಮ ಮತ್ತು ಸುಸೂತ್ರದ ದಸರೆಯಾಗಿದೆ. ಹೀಗಾಗಿ ಅರ್ಜುನನ್ನು ಇಂದು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಿದೆ.

ಅರ್ಜುನನ ಹಿನ್ನೆಲೆ…..
1968ರಲ್ಲಿ ಕಾಕನಕೋಟೆಯ ಕಾರ್ಯಚರಣೆಯಲ್ಲಿ ಸೆರೆಸಿಕ್ಕಿದ್ದ ಅರ್ಜುನ ಆನೆಯನ್ನು ಮಾವುತರು ಚೆನ್ನಾಗಿ ಪಳಗಿಸಿ ನಂತರ 1990ರಲ್ಲಿ ಮೈಸೂರಿನ ದಸರಾ ಉತ್ಸವದ ಶಿಬಿರಕ್ಕೆ ಕರೆತರಲಾಗಿತ್ತು. ಬಲರಾಮ ಆನೆ ಬಳಿಕ ಅರ್ಜುನನೇ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದ. ಅರ್ಜುನನು 6040ಕೆಜಿ ತೂಕ, 2.95ಮೀಟರ್‌ ಉದ್ದ ಇದ್ದ. ಸತತ 22ವರ್ಷದಿಂದ ನಾಡಹಬ್ಬ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ. ಅರ್ಜುನ ಸಾವನ್ನಪ್ಪಿವಾಗ ಆತನಿಗೆ 63ವರ್ಷ ವಯಸ್ಸಾಗಿತ್ತು..

 

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

29 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

9 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

9 hours ago