ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.
2024ನೇ ವರ್ಷದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ.
ಮೊದಲಿಗೆ ನಂದಿಧ್ವಜ ಪೂಜೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು, ನಂದಿಧ್ವಜ ಪೂಜೆ ನೆರವೇರಿಸಲಿದ್ದಾರೆ.
ಬಳಿಕ ಸಿಎಂ ಸಿದ್ದರಾಮಯ್ಯ ಅವರು ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಶಾಸಕರು ಹಾಗೂ ಸಚಿವರು ಉಪಸ್ಥಿತರಿರಲಿದ್ದಾರೆ.
ಅರಮನೆ ಒಳಾವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಕ್ಯಾಪ್ಟನ್ ಅಭಿಮನ್ಯು ಚಿನ್ನದ ಅಂಬಾರಿಯನ್ನು ಹೊತ್ತು ರಾಜಬೀದಿಯಲ್ಲಿ ಗಜಗಾಂಭೀರ್ಯದ ನಡಿಗೆ ಹಾಕಲಿದ್ದು, ಬನ್ನಿಮಂಟಪ ತಲುಪಲಿದ್ದಾನೆ.
ಬಳಿಕ ಇಂದು ಸಂಜೆಯ ವೇಳೆಗೆ ಬನ್ನಿಮಂಟಪದ ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ಅದನ್ನು ನೋಡಲು ಲಕ್ಷಾಂತರ ಜನ ಸೇರಲಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…