ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಮೈಸೂರಿನ ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ 45 ತಳಿಯ ಸುಮಾರು 480 ಶ್ವಾನಗಳು ಪಾಲ್ಗೊಂಡಿದ್ದವು.
ಜರ್ಮನ್ ಶೆಫರ್ಡ್, ಇಂಡಿಯನ್ ಮಸ್ಟಿಫ್, ಡಾಬರ್ ಮ್ಯಾನ್, ಪಿಟ್ ಬುಲ್, ಬಾಕ್ಸರ್ ಸೇರಿದಂತೆ ಅನೇಕ ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.
ಕಳೆದ ಬಾರಿ ದಸರಾದಲ್ಲಿ ಸುಮಾರು 20 ರಿಂದ 25 ತಳಿಗಳ ಶ್ವಾನಗಳು ಮಾತ್ರ ನೋಂದಣಿಯಾಗಿದ್ದವು. ಆದರೆ ಈ ಬಾರಿ 45 ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದು ವಿಶೇಷವೆನಿಸಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಆಗಮಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮುದ್ದು ಪ್ರಾಣಿಗಳು ನಮ್ಮ ಮಕ್ಕಳಿದ್ದಂತೆ. ಅವುಗಳನ್ನು ನಾವು ಪ್ರೀತಿಯಿಂದ ನೋಡಿಕೊಳ್ಳಬೇಕು. ಇಂತಹ ಶ್ವಾನಗಳ ಪ್ರದರ್ಶನದಿಂದ ಮಕ್ಕಳಲ್ಲಿ ಪ್ರಾಣಿಗಳ ಪ್ರೀತಿ ಹೆಚ್ಚಾಗುತ್ತದೆ ಎಂದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…