ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಮೈಸೂರಿನ ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ 45 ತಳಿಯ ಸುಮಾರು 480 ಶ್ವಾನಗಳು ಪಾಲ್ಗೊಂಡಿದ್ದವು.
ಜರ್ಮನ್ ಶೆಫರ್ಡ್, ಇಂಡಿಯನ್ ಮಸ್ಟಿಫ್, ಡಾಬರ್ ಮ್ಯಾನ್, ಪಿಟ್ ಬುಲ್, ಬಾಕ್ಸರ್ ಸೇರಿದಂತೆ ಅನೇಕ ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.
ಕಳೆದ ಬಾರಿ ದಸರಾದಲ್ಲಿ ಸುಮಾರು 20 ರಿಂದ 25 ತಳಿಗಳ ಶ್ವಾನಗಳು ಮಾತ್ರ ನೋಂದಣಿಯಾಗಿದ್ದವು. ಆದರೆ ಈ ಬಾರಿ 45 ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದು ವಿಶೇಷವೆನಿಸಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಆಗಮಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮುದ್ದು ಪ್ರಾಣಿಗಳು ನಮ್ಮ ಮಕ್ಕಳಿದ್ದಂತೆ. ಅವುಗಳನ್ನು ನಾವು ಪ್ರೀತಿಯಿಂದ ನೋಡಿಕೊಳ್ಳಬೇಕು. ಇಂತಹ ಶ್ವಾನಗಳ ಪ್ರದರ್ಶನದಿಂದ ಮಕ್ಕಳಲ್ಲಿ ಪ್ರಾಣಿಗಳ ಪ್ರೀತಿ ಹೆಚ್ಚಾಗುತ್ತದೆ ಎಂದರು.
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…