ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಮೈಸೂರಿನ ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ 45 ತಳಿಯ ಸುಮಾರು 480 ಶ್ವಾನಗಳು ಪಾಲ್ಗೊಂಡಿದ್ದವು.
ಜರ್ಮನ್ ಶೆಫರ್ಡ್, ಇಂಡಿಯನ್ ಮಸ್ಟಿಫ್, ಡಾಬರ್ ಮ್ಯಾನ್, ಪಿಟ್ ಬುಲ್, ಬಾಕ್ಸರ್ ಸೇರಿದಂತೆ ಅನೇಕ ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.
ಕಳೆದ ಬಾರಿ ದಸರಾದಲ್ಲಿ ಸುಮಾರು 20 ರಿಂದ 25 ತಳಿಗಳ ಶ್ವಾನಗಳು ಮಾತ್ರ ನೋಂದಣಿಯಾಗಿದ್ದವು. ಆದರೆ ಈ ಬಾರಿ 45 ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದು ವಿಶೇಷವೆನಿಸಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಆಗಮಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮುದ್ದು ಪ್ರಾಣಿಗಳು ನಮ್ಮ ಮಕ್ಕಳಿದ್ದಂತೆ. ಅವುಗಳನ್ನು ನಾವು ಪ್ರೀತಿಯಿಂದ ನೋಡಿಕೊಳ್ಳಬೇಕು. ಇಂತಹ ಶ್ವಾನಗಳ ಪ್ರದರ್ಶನದಿಂದ ಮಕ್ಕಳಲ್ಲಿ ಪ್ರಾಣಿಗಳ ಪ್ರೀತಿ ಹೆಚ್ಚಾಗುತ್ತದೆ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…