ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ.
ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದನು. ಕ್ಯಾಪ್ಟನ್ ಅಭಿಮನ್ಯುಗೆ ಹಿರಣ್ಯ ಹಾಗೂ ಲಕ್ಷ್ಮೀ ಆನೆಗಳು ಕುಮ್ಕಿ ಆನೆಗಳಾಗಿ ಸಾಥ್ ನೀಡಿದವು.
ಬಳಿಕ ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಿ, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಸೀಮಾ ಲಾಟ್ಕರ್ ಅವರು ಶುಭ ಕುಂಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಅರಮನೆ ವೇದಿಕೆಯತ್ತ ಬಂದು ನಿಂತ ಬಳಿಕ ಮೊದಲು ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಆ ತಕ್ಷಣವೇ 21 ಸುತ್ತು ಕುಶಾಲತೋಪುಗಳನ್ನು ಸಿಡಿಸುವ ಮೂಲಕ ಗೌರವ ಸಮರ್ಪಿಸಲಾಯಿತು.
ಇದಾದ ಬಳಿಕ ಅರಮನೆಯಿಂದ ಬನ್ನಿಮಂಟಪಕ್ಕೆ ಜಂಬೂಸವಾರಿ ಮೆರವಣಿಗೆ ಸಾಗಿತು. ಜಂಬೂಸವಾರಿ ಮೆರವಣಿಗೆಯಲ್ಲಿ 51 ಸ್ತಬ್ಧಚಿತ್ರಗಳು ಸೇರಿದಂತೆ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…