ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ.
ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದನು. ಕ್ಯಾಪ್ಟನ್ ಅಭಿಮನ್ಯುಗೆ ಹಿರಣ್ಯ ಹಾಗೂ ಲಕ್ಷ್ಮೀ ಆನೆಗಳು ಕುಮ್ಕಿ ಆನೆಗಳಾಗಿ ಸಾಥ್ ನೀಡಿದವು.
ಬಳಿಕ ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಿ, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಸೀಮಾ ಲಾಟ್ಕರ್ ಅವರು ಶುಭ ಕುಂಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಅರಮನೆ ವೇದಿಕೆಯತ್ತ ಬಂದು ನಿಂತ ಬಳಿಕ ಮೊದಲು ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಆ ತಕ್ಷಣವೇ 21 ಸುತ್ತು ಕುಶಾಲತೋಪುಗಳನ್ನು ಸಿಡಿಸುವ ಮೂಲಕ ಗೌರವ ಸಮರ್ಪಿಸಲಾಯಿತು.
ಇದಾದ ಬಳಿಕ ಅರಮನೆಯಿಂದ ಬನ್ನಿಮಂಟಪಕ್ಕೆ ಜಂಬೂಸವಾರಿ ಮೆರವಣಿಗೆ ಸಾಗಿತು. ಜಂಬೂಸವಾರಿ ಮೆರವಣಿಗೆಯಲ್ಲಿ 51 ಸ್ತಬ್ಧಚಿತ್ರಗಳು ಸೇರಿದಂತೆ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…