ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಈ ಬಾರಿ ಧನಂಜಯ ಆಯ್ಕೆಯಾಗಿದ್ದಾನೆ.
ಈ ಮೂಲಕ ಅರ್ಜುನನ ಸ್ಥಾನವನ್ನು ಧನಂಜಯ ಆನೆ ತುಂಬಲಿದ್ದಾನೆ.
ಈ ಬಗ್ಗೆ ಇಂದು ಮಾತನಾಡಿದ ಡಿಸಿಎಫ್ ಡಾ.ಪ್ರಭುಗೌಡ ಅವರು, ಜಂಬೂಸವಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗಲಿದ್ದಾನೆ.
ಅಭಿಮನ್ಯುಗೆ ಹಿರಣ್ಯ ಹಾಗೂ ಲಕ್ಷ್ಮಿ ಆನೆಗಳು ಕುಮ್ಕಿ ಆನೆಗಳಾಗಿ ಸಾಗಲಿವೆ ಎಂದು ಮಾಹಿತಿ ನೀಡಿದರು.
ಇನ್ನು ಈ ಬಾರಿ ನಿಶಾನೆ ಆನೆಯಾಗಿ ಧನಂಜಯನನ್ನು ಆಯ್ಕೆ ಮಾಡಲಾಗಿದ್ದು, ನೌಫತ್ ಆನೆಯಾಗಿ ಗೋಪಿ ಸಾಗಲಿದ್ದಾನೆ. ಜಂಬೂಸವಾರಿಯಲ್ಲಿ 9 ಆನೆಗಳು ಭಾಗಿಯಾಗಲಿವೆ ಎಂದು ಮಾಹಿತಿ ನೀಡಿದರು.
ಕಳೆದ ಬಾರಿ ನಿಶಾನೆ ಆನೆಯಾಗಿ ಅರ್ಜುನ ಸಾಗಿದ್ದನು. ಆದರೆ ಕಾಡಾನೆ ದಾಳಿಯಲ್ಲಿ ಅರ್ಜುನ ವೀರಮರಣವನ್ನಪ್ಪಿದ ಹಿನ್ನೆಲೆಯಲ್ಲಿ ಈ ಬಾರಿ ಧನಂಜಯ ಆನೆಯನ್ನು ನಿಶಾನೆ ಆನೆಯಾಗಿ ಆಯ್ಕೆ ಮಾಡಲಾಗಿದೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…