ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಈ ಬಾರಿ ಧನಂಜಯ ಆಯ್ಕೆಯಾಗಿದ್ದಾನೆ.
ಈ ಮೂಲಕ ಅರ್ಜುನನ ಸ್ಥಾನವನ್ನು ಧನಂಜಯ ಆನೆ ತುಂಬಲಿದ್ದಾನೆ.
ಈ ಬಗ್ಗೆ ಇಂದು ಮಾತನಾಡಿದ ಡಿಸಿಎಫ್ ಡಾ.ಪ್ರಭುಗೌಡ ಅವರು, ಜಂಬೂಸವಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗಲಿದ್ದಾನೆ.
ಅಭಿಮನ್ಯುಗೆ ಹಿರಣ್ಯ ಹಾಗೂ ಲಕ್ಷ್ಮಿ ಆನೆಗಳು ಕುಮ್ಕಿ ಆನೆಗಳಾಗಿ ಸಾಗಲಿವೆ ಎಂದು ಮಾಹಿತಿ ನೀಡಿದರು.
ಇನ್ನು ಈ ಬಾರಿ ನಿಶಾನೆ ಆನೆಯಾಗಿ ಧನಂಜಯನನ್ನು ಆಯ್ಕೆ ಮಾಡಲಾಗಿದ್ದು, ನೌಫತ್ ಆನೆಯಾಗಿ ಗೋಪಿ ಸಾಗಲಿದ್ದಾನೆ. ಜಂಬೂಸವಾರಿಯಲ್ಲಿ 9 ಆನೆಗಳು ಭಾಗಿಯಾಗಲಿವೆ ಎಂದು ಮಾಹಿತಿ ನೀಡಿದರು.
ಕಳೆದ ಬಾರಿ ನಿಶಾನೆ ಆನೆಯಾಗಿ ಅರ್ಜುನ ಸಾಗಿದ್ದನು. ಆದರೆ ಕಾಡಾನೆ ದಾಳಿಯಲ್ಲಿ ಅರ್ಜುನ ವೀರಮರಣವನ್ನಪ್ಪಿದ ಹಿನ್ನೆಲೆಯಲ್ಲಿ ಈ ಬಾರಿ ಧನಂಜಯ ಆನೆಯನ್ನು ನಿಶಾನೆ ಆನೆಯಾಗಿ ಆಯ್ಕೆ ಮಾಡಲಾಗಿದೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…