ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಈ ಬಾರಿ ಧನಂಜಯ ಆಯ್ಕೆಯಾಗಿದ್ದಾನೆ.
ಈ ಮೂಲಕ ಅರ್ಜುನನ ಸ್ಥಾನವನ್ನು ಧನಂಜಯ ಆನೆ ತುಂಬಲಿದ್ದಾನೆ.
ಈ ಬಗ್ಗೆ ಇಂದು ಮಾತನಾಡಿದ ಡಿಸಿಎಫ್ ಡಾ.ಪ್ರಭುಗೌಡ ಅವರು, ಜಂಬೂಸವಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗಲಿದ್ದಾನೆ.
ಅಭಿಮನ್ಯುಗೆ ಹಿರಣ್ಯ ಹಾಗೂ ಲಕ್ಷ್ಮಿ ಆನೆಗಳು ಕುಮ್ಕಿ ಆನೆಗಳಾಗಿ ಸಾಗಲಿವೆ ಎಂದು ಮಾಹಿತಿ ನೀಡಿದರು.
ಇನ್ನು ಈ ಬಾರಿ ನಿಶಾನೆ ಆನೆಯಾಗಿ ಧನಂಜಯನನ್ನು ಆಯ್ಕೆ ಮಾಡಲಾಗಿದ್ದು, ನೌಫತ್ ಆನೆಯಾಗಿ ಗೋಪಿ ಸಾಗಲಿದ್ದಾನೆ. ಜಂಬೂಸವಾರಿಯಲ್ಲಿ 9 ಆನೆಗಳು ಭಾಗಿಯಾಗಲಿವೆ ಎಂದು ಮಾಹಿತಿ ನೀಡಿದರು.
ಕಳೆದ ಬಾರಿ ನಿಶಾನೆ ಆನೆಯಾಗಿ ಅರ್ಜುನ ಸಾಗಿದ್ದನು. ಆದರೆ ಕಾಡಾನೆ ದಾಳಿಯಲ್ಲಿ ಅರ್ಜುನ ವೀರಮರಣವನ್ನಪ್ಪಿದ ಹಿನ್ನೆಲೆಯಲ್ಲಿ ಈ ಬಾರಿ ಧನಂಜಯ ಆನೆಯನ್ನು ನಿಶಾನೆ ಆನೆಯಾಗಿ ಆಯ್ಕೆ ಮಾಡಲಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…