ನಮ್ಮ ಮೈಸೂರ ದಸರಾ 2024

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ

ಮೈಸೂರು: ದಸರಾ ಎಂಬುದು ನಮ್ಮ ಹಿರಿಯರು ನಮಗಾಗಿ ನೀಡಿದಂತಹ ದೊಡ್ಡ ಉತ್ಸವ. ಈ ಉತ್ಸವವು ಕೇವಲ ಮೈಸೂರಿಗಷ್ಟೇ ಸೀಮಿತವಾಗಿರದೆ ಇಡೀ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರ ಗಮನವನ್ನು ಸೆಳೆಯುತ್ತದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

ಇಂದು ಮೈಸೂರು ದಸರಾ ಅಂಗವಾಗಿ ಮೈಸೂರು ಅರಮನೆಯ ಒಳ ಆವರಣದಲ್ಲಿ ಆಯೋಜಿಸಲಾಗಿದ್ದ, ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಲಾವಿದರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿ ಕಲಾವಿದರ ಪ್ರತಿಭೆಗೆ ಪ್ರೋತ್ಸಾಹ ನೀಡಲಾಗುತ್ತದೆ. ಅದೇ ರೀತಿಯಲ್ಲಿ ಇಂದು ಮಹಿಳೆಯರಿಗಾಗಿ ಏರ್ಪಡಿಸಲಾಗಿರುವ ರಂಗೋಲಿ ಸ್ಪರ್ಧೆಯಲ್ಲಿ 100ಕ್ಕೂ ಅಧಿಕ ಮಹಿಳೆಯರು ಭಾಗವಹಿಸಿರುವುದು ಸಂತಸದ ವಿಷಯ ಎಂದರು.

ರಂಗೋಲಿ ಎಂಬುದು ತಲತಲಾಂತರಗಳಿಂದ ಬಂದ ಕಲೆ. ಹಿಂದೆ ಕೇವಲ ಮಹಿಳೆಯರಿಗಷ್ಟೇ ಸೀಮಿತವಾಗಿದ್ದ ಈ ಕಲೆ ಇಂದು ವಿವಿಧ ರೂಪ ತಾಳಿ ಪುರುಷರು ರಂಗೋಲಿಯಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸುತ್ತಿದ್ದಾರೆ. ಹಳ್ಳಿಗಳಲ್ಲಿ ಮಹಿಳೆಯರು ಜನಪದ ಗೀತೆಗಳನ್ನು ಹಾಡುತ್ತಾ ಸಗಣಿಯನ್ನು ಚಿಮ್ಮಿ ಅದರ ಮೇಲೆ ರಂಗೋಲಿ ಬಿಡುವಂಥದ್ದು, ನಗರಗಳಲ್ಲಿ ಮನೆಯ ಮುಂದಿನ ಸೌಂದರ್ಯವನ್ನು ಹೆಚ್ಚಿಸಲು ರಂಗೋಲಿ ಬಿಡುವ ದೃಶ್ಯಗಳು ಎಲ್ಲರ ಕಣ್ಮನ ಸೆಳೆಯುತ್ತವೆ ಎಂದರು.

ಇಂದು ರಂಗೋಲಿಯ ವಿಶಿಷ್ಟ ರೂಪ ಹಾಗೂ ಅದರ ಮಹತ್ವವನ್ನು ತಿಳಿಸಲು ಮೈಸೂರು ದಸರಾದಂತಹ ದೊಡ್ಡ ಮಹೋತ್ಸವದಲ್ಲಿ ಸ್ಪರ್ಧೆ ಮಾಡುತ್ತಿರುವುದರಿಂದ ಎಷ್ಟೋ ರಂಗೋಲಿ ಪ್ರತಿಭೆಗಳ, ಚಿತ್ರಕಲಾ ಕಲಾವಿದರ ಅನಾವರಣಗೊಳ್ಳಲಿದೆ. ಸೋಲು-ಗೆಲುವಿನ ನಿರೀಕ್ಷೆ ಬಿಟ್ಟು ಪ್ರತಿಯೊಬ್ಬ ಸ್ಪರ್ಧಿಯು ತಮ್ಮಲ್ಲಿರುವ ಕಲೆಯನ್ನು ಪ್ರಸ್ತುತ ಪಡಿಸಲು ಮುಂದಾಗಿ ಎಂದು ಶುಭ ಹಾರೈಸಿದರು.

ಮೈಸೂರಿನ ಇಬ್ಬರು ಕಲಾವಿದರು ಏಪ್ರಿಲ್ 14 ರಂದು ಇದೇ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ರಂಗೋಲಿಯಲ್ಲಿ ಅಂಬೇಡ್ಕರ್ ಚಿತ್ರವನ್ನು ಬಿಡಿಸಿದ್ದು, ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕುವೆಂಪುನಗರ ಪಾರ್ಕ್ನಲ್ಲಿ 120 ಅಡಿಯ ರಾಮಮಂದಿರ ಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿದ್ದಂತಹ ಸಂದರ್ಭಗಳು ರಂಗೋಲಿಯ ಮಹತ್ವ ಹಾಗೂ ಸೌಂದರ್ಯವನ್ನು ತಿಳಿಸುತ್ತವೆ ಎಂದರು.

ರಂಗೋಲಿ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 100 ಮಹಿಳೆಯರು ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ಮಹಿಸಾಸುರ ರೂಪ, ಮೈಸೂರು ದಸರಾ ಅಂಬಾರಿಯನ್ನು ಹೊತ್ತಿರುವ ಆನೆಯ ಚಿತ್ರ, ಬಸವ ಮತ್ತು ಶಿವ, ಲಿಂಗ ಸಮಾನತೆಯನ್ನು ಉತ್ತೇಜಿಸೋಣ ಎಂಬ ವಿಷಯದ ಮೇಲೆ, ಮಹಿಳೆಯ ಮೇಲೆ ಆಗುತ್ತಿರುವ ಅತ್ಯಾಚಾರ ತಡೆಗಟ್ಟುವುದು ಸೇರಿದಂತೆ ಬಣ್ಣದ ಬಣ್ಣದ ರಂಗೋಲಿ ಬಿಡಿಸಿ ಸಂಭ್ರಮಿಸಿದ್ದು, ಸ್ಪರ್ಧೆಯಲ್ಲಿ ಮೂರು ಬಹುಮಾನ, ಮೂರು ಸಮಾಧಾನಕರ ಬಹುಮಾನ ಮತ್ತು ಭಾಗವಹಿಸಿದವರೆಲ್ಲರಿಗೂ ಪ್ರಶಸ್ತಿ ಪತ್ರಗಳನ್ನು ಅ.8ರಂದು ನೀಡಲಾಗುತ್ತದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

19 mins ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

21 mins ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

23 mins ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

25 mins ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

29 mins ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

32 mins ago