ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂಭ್ರಮದ ಮಧ್ಯೆ ಮಳೆರಾಯ ಆಗಮಿಸಿದ್ದಾನೆ.
ಹೌದು ಮೈಸೂರಿನಲ್ಲಿ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಮಧ್ಯಾಹ್ನದ ವೇಳೆ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ವರುಣನ ಆಗಮನದ ನಡುವೆಯೂ ಜನತೆ ದಸರಾವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಜಿಟಿ ಜಿಟಿ ಮಳೆ ಬರುತ್ತಿರುವ ಪರಿಣಾಮ ನಗರದಲ್ಲಿ ಚಳಿಯ ವಾತಾವರಣ ನಿರ್ಮಾಣವಾಗಿದೆ. ಆದರೆ ಇದ್ಯಾವುದನ್ನು ಲೆಕ್ಕಿಸದ ಜನತೆ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲೇಬೇಕೆಂದು ರಸ್ತೆಯ ಇಕ್ಕೆಲಗಳಲ್ಲಿ ಜಮಾಯಿಸಿದ್ದಾರೆ.
ಸದ್ಯ ಜಿಟಿ ಜಿಟಿ ಮಳೆಯ ನಡುವೆಯೂ ಈ ಬಾರಿ 51 ಸ್ತಬ್ಧಚಿತ್ರಗಳು ಮೆರವಣಿಗೆಗಳು ಸಾಗುತ್ತಿದ್ದು, ಟ್ಯಾಬ್ಲೋಗಳ ಮುಂದೆ ಜಾನಪದ ಕಲಾತಂಡಗಳು ಮೆರಗು ನೀಡುತ್ತಿವೆ.
ರಸ್ತೆಗಳಲ್ಲಿ ಕಿಕ್ಕಿರಿದು ಸೇರಿರುವ ಜನತೆ ಸದ್ಯ ಸ್ತಬ್ಧಚಿತ್ರಗಳನ್ನು ನೋಡಿ ಖುಷಿಪಡುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…