ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ.
ಇಂದು ಅರಮನೆ ಆವರಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಉಪಹಾರ ಕೂಡ ಏರ್ಪಡಿಸಿದ್ದರು.
ಪ್ರತಿ ವರ್ಷದಂತೆ ಈ ವರ್ಷವೂ ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಉಪಹಾರ ಆಯೋಜನೆ ಮಾಡಿದ್ದು, ಶೋಭಾ ಕರಂದ್ಲಾಜೆ ಅವರೇ ಸ್ವತಃ ಉಪಹಾರ ಬಡಿಸಿದರು.
ಈ ವೇಳೆ ಶಾಸಕ ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಾಥ್ ನೀಡಿದರು.
ಬಳಿಕ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಪ್ರತಿ ವರ್ಷದಂತೆ ಈ ವರ್ಷವೂ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಅದೇ ರೀತಿ ಕಾವಾಡಿಗರು ಹಾಗೂ ಮಾವುತರ ಕುಟುಂಬಕ್ಕೆ ಉಪಹಾರ ಬಡಿಸಿದ್ದೇನೆ ಎಂದು ಖುಷಿಪಟ್ಟರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…