ನಮ್ಮ ಮೈಸೂರ ದಸರಾ 2024

ಕಳೆಗಟ್ಟಿದ ದಸರಾ ಸಂಭ್ರಮ: ದಂಪತಿಗಳ ಟಾಂಗಾ ಸಾರೋಟ್‌ ಸವಾರಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಇಂದು ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ದಂಪತಿಗಳು ವಿವಿಧ ಪ್ರಕಾರ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಟಾಂಗಾ ಸಾರೋಟ್‌ ಸವಾರಿ ನಡೆಸಿದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ರಂಗಚಾರ್ಲು ಪುರಭವನದ ಆವರಣದಲ್ಲಿ ನಡೆದ ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗೆ ಟಾಂಗಾ ಸವಾರಿಯನ್ನು ಜೋಡಿಗಳಿಗೆ ಬಾಗಿನ ಕೊಡಲಾಯಿತು. ಈ ಮೂಲಕ ಟಾಂಗಾ ಸವಾರಿ ಪ್ರಾರಂಭ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು ಅವರು, ನಮ್ಮ ಇಲಾಖೆಯು ಪರಂಪರೆಯನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಈ ಮೂಲಕ ಅದನ್ನು ಹೆಚ್ಚು ಜನರಿಗೆ ತಲುಪಿಸುವ ಕೆಲಸ ಆಗುತ್ತಿದೆ.

ಮೈಸೂರು ಎಂದರೆ ಟಾಂಗಾ, ಟಾಂಗಾ ಎಂದರೆ ಮೈಸೂರು ಎಂಬ ಪ್ರತೀತಿ ಇದೆ. ಹಾಗಾಗಿ ಸಾಂಪ್ರದಾಯಿಕ ಉಡುಗೆ ಮತ್ತು ಟಾಂಗಾ ಸವಾರಿ ಇವೆರಡನ್ನು ಒಂದುಗೂಡಿಸಿ ಪಾರಂಪರಿಕ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಇನ್ನು ಟಾಂಗಾ ಸವಾರಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ದಂಪತಿಗಳು ಆಯಾಯ ಜಿಲ್ಲೆಗಳ ಸಾಂಪ್ರದಾಯಿಕ ಉಡುಗೆಯ ಮೂಲಕ ಕಣ್ಮನ ಸೆಳೆದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

3 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

4 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

4 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

5 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

5 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

5 hours ago