ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಇಂದು ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ದಂಪತಿಗಳು ವಿವಿಧ ಪ್ರಕಾರ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಟಾಂಗಾ ಸಾರೋಟ್ ಸವಾರಿ ನಡೆಸಿದರು.
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ರಂಗಚಾರ್ಲು ಪುರಭವನದ ಆವರಣದಲ್ಲಿ ನಡೆದ ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗೆ ಟಾಂಗಾ ಸವಾರಿಯನ್ನು ಜೋಡಿಗಳಿಗೆ ಬಾಗಿನ ಕೊಡಲಾಯಿತು. ಈ ಮೂಲಕ ಟಾಂಗಾ ಸವಾರಿ ಪ್ರಾರಂಭ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು ಅವರು, ನಮ್ಮ ಇಲಾಖೆಯು ಪರಂಪರೆಯನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಈ ಮೂಲಕ ಅದನ್ನು ಹೆಚ್ಚು ಜನರಿಗೆ ತಲುಪಿಸುವ ಕೆಲಸ ಆಗುತ್ತಿದೆ.
ಮೈಸೂರು ಎಂದರೆ ಟಾಂಗಾ, ಟಾಂಗಾ ಎಂದರೆ ಮೈಸೂರು ಎಂಬ ಪ್ರತೀತಿ ಇದೆ. ಹಾಗಾಗಿ ಸಾಂಪ್ರದಾಯಿಕ ಉಡುಗೆ ಮತ್ತು ಟಾಂಗಾ ಸವಾರಿ ಇವೆರಡನ್ನು ಒಂದುಗೂಡಿಸಿ ಪಾರಂಪರಿಕ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಇನ್ನು ಟಾಂಗಾ ಸವಾರಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ದಂಪತಿಗಳು ಆಯಾಯ ಜಿಲ್ಲೆಗಳ ಸಾಂಪ್ರದಾಯಿಕ ಉಡುಗೆಯ ಮೂಲಕ ಕಣ್ಮನ ಸೆಳೆದರು.
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…
ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…