ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಯನ್ನು ಆಯೋಜನೆ ಮಾಡಲಾಗಿತ್ತು.
ಮೈಸೂರಿನ ಹೆಬ್ಬಾಳ್ ನ್ಯಾಷನಲ್ ಗ್ರಾನೈಟ್ ಇಂಡಸ್ಟ್ರೀಸ್ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಚಾಲನೆ ನೀಡಿದರು. ಈ ವೇಳೆ ಕಾರುಗಳಲ್ಲಿ ಕುಳಿತು ಫೋಟೋಗೆ ಫೋಸ್ ನೀಡಿದರು.
ಬಳಿಕ ವಿಂಟೇಜ್ ಕಾರ್ ಶೋ ರ್ಯಾಲಿಗೆ ಹಸಿರು ನಿಶಾನೆ ತೋರಿದರು.
ಕಾರ್ಯಕ್ರಮದಲ್ಲಿ ಸಂದೀಪ್ ನಾಯಕ್, ಗಿರಿಧರ್, ವಿಕ್ರಮ್ ಮುತ್ತಣ್ಣ, ಗೋಪಿನಾಥ್ ಶೆಣೈ ಸೇರಿದಂತೆ ಹಲವರು ಭಾಗಿಯಾಗಿದ್ದರು.





