ಮೈಸೂರು: ಮೈಸೂರಿನ ಯೋಗಕ್ಕೆ ವಿಶ್ವ ಪರಂಪರೆ ಇದೆ. ಮೈಸೂರಿನ ಯೋಗ ವಿಶ್ವ ಪ್ರಸಿದ್ಧಿಯನ್ನು ಪಡೆದಿದ್ದು, ಎಲ್ಲಾ ವಯೋಮಾನದವರು ಯೋಗದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.
ಇಂದು ಮೈಸೂರು ದಸರಾ ಅಂಗವಾಗಿ ಮೈಸೂರು ದಸರಾ ವಸ್ತು ಪ್ರದರ್ಶನದಲ್ಲಿನ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ, ರಾಜ್ಯಮಟ್ಟದ ದಸರಾ ಯೋಗಾಸನ ಸ್ಪರ್ಧೆಯನ್ನು ಶಾಸಕ ಶ್ರೀವತ್ಸ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯಮಟ್ಟದಲ್ಲಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಮಾಡಿದವರು ಮೈಸೂರಿನಲ್ಲಿ ಯೋಗ ಕೇಂದ್ರಗಳನ್ನು ಸ್ಥಾಪನೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಲಾವಿದರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿ ಕಲಾವಿದರ ಪ್ರತಿಭೆಗೆ ಪ್ರೋತ್ಸಾಹ ನೀಡಲಾಗುತ್ತದೆ. ಅದೇ ರೀತಿಯಲ್ಲಿ ಇಂದು ಯೋಗಾಪಟುಗಳಿಗೆ ಯೋಗಾಸನ ಸ್ಪರ್ಧೆಯಲ್ಲಿ 2000 ಸಾವಿರಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಿದ್ದರು. ಹಾಗೆಯೇ ವಿಶೇಷ ಚೇತನ ಮಕ್ಕಳು, ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿವಿಧ ಆಸನಗಳನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…