ನಮ್ಮ ಮೈಸೂರ ದಸರಾ 2024

Mysuru dasara 2024: ಫಲಪುಷ್ಪ ಪ್ರದರ್ಶನದಲ್ಲಿ `ಕರ್ನಾಟಕ ಸಂಭ್ರಮ 50′ ʻಸರ್ಕಾರದ ಪಂಚ ಗ್ಯಾರಂಟಿʼ

ಮೈಸೂರು: ದಸರಾ ಮಹೋತ್ಸವದ ವಿಶೇಷ ಆಕರ್ಷಣೆಯಲ್ಲಿ ಒಂದಾದ ದಸರಾ ಫಲಪುಷ್ಪ ಪ್ರದರ್ಶನವು ಪ್ರವಾಸಿಗರ ಆಕರ್ಷಣೆ ಕೇಂದ್ರ ಬಿಂದುವಾಗಿದೆ.

ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಕುಪ್ಪಣ್ಣ ಉದ್ಯಾನವನದಲ್ಲಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನವನ್ನು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅಧಿಕೃತವಾಗಿ ಉದ್ಘಾಟಿಸಿದ್ದು, ಇಂದಿನಿಂದ ಅಧಿಕೃತ ವಿಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಗಮನ ಸೆಳೆಯಲಿವೆ ಬೌದ್ಧ ಬೋಧನೆಗಳು
ಗಾಜಿನ ಮನೆಯೊಳಗೆ ನಿರ್ಮಿಸಿರುವ ಶಾಕ್ಯ ರಾಜಮನೆತನ ಬೌದ್ಧ ಬೋಧನೆಗಳು ಹಾಗೂ ಬಸವಣ್ಣನವರ ಶ್ರೇಷ್ಠತೆ ಸಾರುವ ಅನುಭವ ಮಂಟಪ, ಪ್ರಜಾಪ್ರಭುತ್ವದ ನೆಲೆಯಲ್ಲಿ ರೂಪಿಸಿರುವ ಸಂಸತ್ ಭವನವು ಪ್ರವಾಸಿಗಳ ಗಮನ ಸೆಳೆಯಲಿದೆ.

ಪಂಚ ಗ್ಯಾರಂಟಿ ಯೋಜನೆ
ಈ ಬಾರಿ ವಿಶೇಷವಾಗಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಯುವನಿಧಿ, ಗೃಹಜ್ಯೋತಿ, ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮೀ ಯೋಜನೆಗಳ ವಿಷಯಾಧಾರಿತವಾದ ಪುಷ್ಪ ಕಲಾಕೃತಿ ಮಾದರಿಗಳನ್ನು ಪ್ರೇಕ್ಷಕರು ನೋಡಬಹುದಾಗಿದೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಮೈಸೂರು ರಾಜ್ಯದಲ್ಲಾದ ಭದ್ರಾವತಿ ಕಾರ್ಖಾನೆ, ಶಿವನಸಮುದ್ರ ವಿದ್ಯುತ್ ಉತ್ಪಾದನೆ, ಮೈಸೂರು ವಿಶ್ವವಿದ್ಯಾಲಯ, ಹಾಗೂ ಮೈಸೂರು ಆಕಾಶವಾಣಿ ಸೇರಿದಂತೆ ಅಭಿವೃದ್ಧಿ ಸಾಧನೆಗಳ ಕುರಿತ ಪುಷ್ಪಗಳ ಮದ್ಯೆ ಇದ್ದ ಚಿತ್ರ ಪ್ರದರ್ಶನ ನೋಡುಗರನ್ನು ಆಕರ್ಷಿಸಲಿದೆ.

ಕರ್ನಾಟಕ ಸಂಭ್ರಮ
50 ಕುಪ್ಪಳ್ಳಿ ಪಾರ್ಕ್ನ ಮುಖ್ಯದ್ವಾರದಲ್ಲಿ ಇತ್ತೀಚಿಗೆ ಸಂಭ್ರಮಿಸಿದ ಕನ್ನಡಿಗರ ಹೆಮ್ಮೆಯ ಕರ್ನಾಟಕ ಸಂಭ್ರಮ:50 ರ ಕುರಿತು ಹಳದಿ ಮತ್ತು ಕೆಂಪು ಬಣ್ಣದ ಗುಲಾಬಿ ಹೂವಿನಿಂದ ನಿರ್ಮಿಸಲಾದ ಕರ್ನಾಟಕ ಭೂಪಟ, ಎಡ ಬಲದಲ್ಲಿ ಆನೆಯ ಮಾದರಿ, ಅಲ್ಲದೆ ಹೂವಿನಿಂದ ಅರಳಿದ ಟೀಮ್ ಇಂಡಿಯಾ ವಿಶ್ವಕಪ್ ಮಾದರಿಯು ಕ್ರೀಡಾಪ್ರಿಯರನ್ನು ಸೆಳೆಯಲಿದೆ.

ಈ ಬಾರಿ ಭಾರತದ ಮೊದಲ ಮಹಿಳಾ ಶಿಕ್ಷಕಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಕ್ರಾಂತಿಯ ಬಗ್ಗೆ ಬೆಳಕು ಚೆಲ್ಲಿದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ, ಒಂದೇ ಮಾನವನ ದೇಹದಲ್ಲಿ ಅರ್ಧಭಾಗ ರೈತ ಇನ್ನರ್ಧ ಭಾಗ ಗಡಿ ಕಾಯುವ ಸೈನಿಕನ ಮಾದರಿ ಬಹಳ ವಿಶೇಷವಾಗಿದೆ.

ಹುಲಿಯನ್ನೇರಿದ ಮಹದೇಶ್ವರ ಸ್ವಾಮಿಯ ಪ್ರತಿಮೆ ಹಾಗೂ ಒಂದೇ ಗೋಪುರದಲ್ಲಿ ಅರಳಿದ ಕರ್ನಾಟಕದ ಅತೀ ದೊಡ್ಡ ದೇವಾಲಯವಾದ ನಂಜನಗೂಡಿನ ಶ್ರೀಕಂಟೇಶ್ವರ ಹಾಗೂ ಶ್ರೀ ಚಾಮುಂಡೇಶ್ವರಿ ದೇವಾಲಯವನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿರುವುದು ಭಕ್ತಿಪ್ರಿಯರನ್ನು ಕೈ ಬೀಸಿ ಕರೆಯುತ್ತದೆ.

ಜನಮನಸೂರೆಗೊಳ್ಳುವಂಥ ಸುಮಾರು ವಿಭಿನ್ನ ಥೀಮ್ನೊಂದಿಗೆ ಈ ಬಾರಿಯ ಫಲಪುಷ್ಪ ಪ್ರದರ್ಶನ ಸಜ್ಜಾಗಿದ್ದು, ಅಲ್ಲದೆ ಫಲಪುಷ್ಪ ಪ್ರದರ್ಶನಕ್ಕೆ ಬಂದಂತಹ ಪ್ರೇಕ್ಷಕರಿಗೆ ವಿವಿಧ ರೀತಿಯ ತಿಂಡಿ ತಿನಿಸುಗಳು, ಆಟಿಕೆಗಳ ವ್ಯವಸ್ಥೆ ಹಾಗೂ ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಮಳಿಗೆಗಳನ್ನು ತೆರೆಯಲಾಗಿದೆ.

ಪ್ರದರ್ಶನದಲ್ಲಿ ವೈವಿಧ್ಯಮಯ ಹೂವುಗಳಲ್ಲಿ ಆಫ್ರಿಕನ್ ಮಾರಿಗೋಲ್ಡ್, ಹಳದಿ, ಆರ್ಕಿಡ್ಗಳು, ಸೆಲೋಸಿಯಾ, ಕಾರ್ನೇಷನ್, ಆಂಥೂರಿಯಂ, ಗರ್ಬೆರಾ, ರೋಸಸ್, ಕಾಸ್ಮೊಸ್, ಬ್ಲೂಡೈಸಿ, ಪಿಂಗ್ ಪಾಂಗ್, ಪೆಟುನಿಯಾ, ಟೊರೆನಿಯಾ, ಡ್ರಾಕೇನಾ, ಟಿಥೋನಿಯಾ , ಜಿನ್ನಿಯಾ ಎಂಬಂತೆ ನಾನಾ ಬಗೆಯ ಹೂವುಗಳನ್ನು ಹೇರಳವಾಗಿ ಬಳಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

1 hour ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

1 hour ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

2 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

2 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

5 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

5 hours ago