ಮೈಸೂರು: ರಾಜಕುಮಾರ ವೇಷ ಭೂಷಣ ತೊಟ್ಟ ಚಿಣ್ಣರು, ಚಾಮುಂಡಿ, ದುರ್ಗಿ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದರು. ಹುಲಿ ಕುಣಿತ, ಗೊಂಬೆ ಕುಣಿತ, ಯಕ್ಷಗಾನ, ಜನಪದ ನೃತ್ಯ, ಕಂಸಾಳೆ, ಡೊಳ್ಳು ಕುಣಿತ, ಗಾಯನ ಹೀಗೆ ನಾನಾ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾದರು.
ಇದು… ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ, ಮಕ್ಕಳ ದಸರಾ ಕಲಾಥಾನ್ ನಲ್ಲಿ ಕಂಡು ಬಂದವು. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಮಕ್ಕಳ ದಸರಾಗೆ ಅದ್ದೂರಿಯಾಗಿ ಚಾಲನೆ ನೀಡಿದರು.
ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ದೇವರಾಜ ಅರಸು ರಸ್ತೆ ಮಾರ್ಗವಾಗಿ ಮಹಾರಾಜ ಸರ್ಕಾರಿ ಪ್ರೌಢಶಾಲೆವರೆಗೆ, ಮಕ್ಕಳಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 1 ಸಾವಿರಕ್ಕೂ ಹೆಚ್ಚು ಶಾಲಾ ಮಕ್ಕಳು ವಿವಿಧ ಬಗೆಯ ಸಾಂಸ್ಕೃತಿಕ, ಜಾನಪದ, ಮಹನೀಯರ ವೇಷ ಭೂಷಣ ತೊಟ್ಟು ಗಾಂಭೀರ್ಯದಿಂದ ಹೆಜ್ಜೆ ಹಾಕಿದರು.
ಶಾಲಾ ಮಕ್ಕಳು ನಾಡಿನ ಕಲೆ ಸಂಸ್ಕೃತಿ ಸಾರುವ ವೇಶ ಭೂಷಣಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.
ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆ ಶಿವರಾಂಪುರ, ಪ್ರೌಢಶಾಲೆ ಕೆ.ಆರ್. ನಗರ, ಸೇಂಟ್ ಜೋಸೆಫ್ ಹುಣಸೂರು, ಸರ್ಕಾರಿ ಪ್ರೌಢಶಾಲೆ ಮೈಸೂರು ಉತ್ತರ ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಸ್ವರ್ಧೆಯಲ್ಲಿ ಭಾಗವಹಿಸಲು ಮಕ್ಕಳು ಆಗಮಿಸಿದ್ದರು.
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…