ಮೈಸೂರು: ರಾಜಕುಮಾರ ವೇಷ ಭೂಷಣ ತೊಟ್ಟ ಚಿಣ್ಣರು, ಚಾಮುಂಡಿ, ದುರ್ಗಿ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದರು. ಹುಲಿ ಕುಣಿತ, ಗೊಂಬೆ ಕುಣಿತ, ಯಕ್ಷಗಾನ, ಜನಪದ ನೃತ್ಯ, ಕಂಸಾಳೆ, ಡೊಳ್ಳು ಕುಣಿತ, ಗಾಯನ ಹೀಗೆ ನಾನಾ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾದರು.
ಇದು… ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ, ಮಕ್ಕಳ ದಸರಾ ಕಲಾಥಾನ್ ನಲ್ಲಿ ಕಂಡು ಬಂದವು. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಮಕ್ಕಳ ದಸರಾಗೆ ಅದ್ದೂರಿಯಾಗಿ ಚಾಲನೆ ನೀಡಿದರು.
ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ದೇವರಾಜ ಅರಸು ರಸ್ತೆ ಮಾರ್ಗವಾಗಿ ಮಹಾರಾಜ ಸರ್ಕಾರಿ ಪ್ರೌಢಶಾಲೆವರೆಗೆ, ಮಕ್ಕಳಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 1 ಸಾವಿರಕ್ಕೂ ಹೆಚ್ಚು ಶಾಲಾ ಮಕ್ಕಳು ವಿವಿಧ ಬಗೆಯ ಸಾಂಸ್ಕೃತಿಕ, ಜಾನಪದ, ಮಹನೀಯರ ವೇಷ ಭೂಷಣ ತೊಟ್ಟು ಗಾಂಭೀರ್ಯದಿಂದ ಹೆಜ್ಜೆ ಹಾಕಿದರು.
ಶಾಲಾ ಮಕ್ಕಳು ನಾಡಿನ ಕಲೆ ಸಂಸ್ಕೃತಿ ಸಾರುವ ವೇಶ ಭೂಷಣಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.
ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆ ಶಿವರಾಂಪುರ, ಪ್ರೌಢಶಾಲೆ ಕೆ.ಆರ್. ನಗರ, ಸೇಂಟ್ ಜೋಸೆಫ್ ಹುಣಸೂರು, ಸರ್ಕಾರಿ ಪ್ರೌಢಶಾಲೆ ಮೈಸೂರು ಉತ್ತರ ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಸ್ವರ್ಧೆಯಲ್ಲಿ ಭಾಗವಹಿಸಲು ಮಕ್ಕಳು ಆಗಮಿಸಿದ್ದರು.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…