ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೃಷಿ ಲಾಭದಾಯಕವಾಗಿಸುವುದೇ ರಾಜ್ಯ ಸರ್ಕಾರದ ಧ್ಯೇಯ. ಅದಕ್ಕಾಗಿ ಕೃಷಿ, ಪಶುಸಂಗೋಪನೆ, ತೋಟಗಾರಿಗೆ ರೇಷ್ಮೆ ಎಲ್ಲವನ್ನೂ ಒಟ್ಟುಗೂಡಿಸಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದರು.
ಹೈನುಗಾರಿಕೆ ಕುರಿ, ಕೋಳಿ, ಹಂದಿ, ಮೀನು, ಜೇನು ಸಾಕಾಣಿಕೆಗಳ ಬಗ್ಗೆಯೂ ಗಮನ ಹರಿಸಬೇಕು. ಆಗ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಿದೆ ಎಂದು ಹೇಳಿದರು.
ಕೃಷಿಕರು ಸಾಂಪ್ರಾದಾಯಿಕ ಕೃಷಿ ಜೊತೆಗೆ ಸಮಗ್ರ ಬೇಸಾಯಕ್ಕೆ ಒತ್ತು ನೀಡಬೇಕು. ಬದಲಾಗುತ್ತಿರುವ ತಂತ್ರಜ್ಞಾನ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಉತ್ಪಾದನೆಯ ಮೌಲ್ಯವರ್ಧನೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ವೆಂಕಟೇಶ್, ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ,
ಶಾಸಕರಾದ ಹರೀಶ್ ಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು. ಇದೇ ವೇಳೆ ರೈತ ಸಾಧಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…