ನಮ್ಮ ಮೈಸೂರ ದಸರಾ 2024

ನಮ್ಮದು ರೈತ ಪರ ಸರ್ಕಾರ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೃಷಿ ಲಾಭದಾಯಕವಾಗಿಸುವುದೇ ರಾಜ್ಯ ಸರ್ಕಾರದ ಧ್ಯೇಯ. ಅದಕ್ಕಾಗಿ ಕೃಷಿ, ಪಶುಸಂಗೋಪನೆ, ತೋಟಗಾರಿಗೆ ರೇಷ್ಮೆ ಎಲ್ಲವನ್ನೂ ಒಟ್ಟುಗೂಡಿಸಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಹೈನುಗಾರಿಕೆ ಕುರಿ, ಕೋಳಿ, ಹಂದಿ, ಮೀನು, ಜೇನು ಸಾಕಾಣಿಕೆಗಳ ಬಗ್ಗೆಯೂ ಗಮನ ಹರಿಸಬೇಕು. ಆಗ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಿದೆ ಎಂದು ಹೇಳಿದರು.

ಕೃಷಿಕರು ಸಾಂಪ್ರಾದಾಯಿಕ ಕೃಷಿ ಜೊತೆಗೆ ಸಮಗ್ರ ಬೇಸಾಯಕ್ಕೆ ಒತ್ತು ನೀಡಬೇಕು. ಬದಲಾಗುತ್ತಿರುವ ತಂತ್ರಜ್ಞಾನ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಉತ್ಪಾದನೆಯ ಮೌಲ್ಯವರ್ಧನೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ವೆಂಕಟೇಶ್, ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ,
ಶಾಸಕರಾದ ಹರೀಶ್ ಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು. ಇದೇ ವೇಳೆ ರೈತ ಸಾಧಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

34 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

2 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

2 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

4 hours ago