ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೃಷಿ ಲಾಭದಾಯಕವಾಗಿಸುವುದೇ ರಾಜ್ಯ ಸರ್ಕಾರದ ಧ್ಯೇಯ. ಅದಕ್ಕಾಗಿ ಕೃಷಿ, ಪಶುಸಂಗೋಪನೆ, ತೋಟಗಾರಿಗೆ ರೇಷ್ಮೆ ಎಲ್ಲವನ್ನೂ ಒಟ್ಟುಗೂಡಿಸಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದರು.
ಹೈನುಗಾರಿಕೆ ಕುರಿ, ಕೋಳಿ, ಹಂದಿ, ಮೀನು, ಜೇನು ಸಾಕಾಣಿಕೆಗಳ ಬಗ್ಗೆಯೂ ಗಮನ ಹರಿಸಬೇಕು. ಆಗ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಿದೆ ಎಂದು ಹೇಳಿದರು.
ಕೃಷಿಕರು ಸಾಂಪ್ರಾದಾಯಿಕ ಕೃಷಿ ಜೊತೆಗೆ ಸಮಗ್ರ ಬೇಸಾಯಕ್ಕೆ ಒತ್ತು ನೀಡಬೇಕು. ಬದಲಾಗುತ್ತಿರುವ ತಂತ್ರಜ್ಞಾನ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಉತ್ಪಾದನೆಯ ಮೌಲ್ಯವರ್ಧನೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ವೆಂಕಟೇಶ್, ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ,
ಶಾಸಕರಾದ ಹರೀಶ್ ಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು. ಇದೇ ವೇಳೆ ರೈತ ಸಾಧಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…