ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೃಷಿ ಲಾಭದಾಯಕವಾಗಿಸುವುದೇ ರಾಜ್ಯ ಸರ್ಕಾರದ ಧ್ಯೇಯ. ಅದಕ್ಕಾಗಿ ಕೃಷಿ, ಪಶುಸಂಗೋಪನೆ, ತೋಟಗಾರಿಗೆ ರೇಷ್ಮೆ ಎಲ್ಲವನ್ನೂ ಒಟ್ಟುಗೂಡಿಸಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದರು.
ಹೈನುಗಾರಿಕೆ ಕುರಿ, ಕೋಳಿ, ಹಂದಿ, ಮೀನು, ಜೇನು ಸಾಕಾಣಿಕೆಗಳ ಬಗ್ಗೆಯೂ ಗಮನ ಹರಿಸಬೇಕು. ಆಗ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಿದೆ ಎಂದು ಹೇಳಿದರು.
ಕೃಷಿಕರು ಸಾಂಪ್ರಾದಾಯಿಕ ಕೃಷಿ ಜೊತೆಗೆ ಸಮಗ್ರ ಬೇಸಾಯಕ್ಕೆ ಒತ್ತು ನೀಡಬೇಕು. ಬದಲಾಗುತ್ತಿರುವ ತಂತ್ರಜ್ಞಾನ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಉತ್ಪಾದನೆಯ ಮೌಲ್ಯವರ್ಧನೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ವೆಂಕಟೇಶ್, ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ,
ಶಾಸಕರಾದ ಹರೀಶ್ ಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು. ಇದೇ ವೇಳೆ ರೈತ ಸಾಧಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…