ನಮ್ಮ ಮೈಸೂರ ದಸರಾ 2024

ಜಂಬೂಸವಾರಿ ವೀಕ್ಷಣೆಗೆ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ ಜನತೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಕ್ಷಣನೆ ಆರಂಭವಾಗಿದ್ದು, ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 1.41 ರಿಂದ 2.10 ಗಂಟೆಯ ವೇಳೆಗೆ ಮಕರ ಲಗ್ನದಲ್ಲಿ ಜರುಗುವ ನಂದಿ ಕಂಬಕ್ಕೆ ಪೂಜೆ ಸಲ್ಲಿಸಿದ್ದು, ನಂತರ ಸಂಜೆ 4 ರಿಂದ 4.30 ಗಂಟೆಯೊಳಗೆ ಸಲ್ಲುವ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಲಿದಾನೆ. ಈ ಐತಿಹಾಸಿಕ ಕ್ಷಣವನ್ನು ದೇಶ-ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ತುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್‌.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ.

ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್‌ಕುಮಾರ್‌ ಪಾರ್ಕ್‌ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸುವ ಕಾತುರದಲ್ಲಿ ಕಾಯುತ್ತಿದ್ದಾರೆ.

ಇನ್ನು ಮೈಸೂರಿನಲ್ಲಿ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದೆ. ಆದರೂ ಮಳೆಯ ನಡುವೆಯೂ ಜನತೆ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಸ್ತೆಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

7 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

17 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

41 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

59 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago