ನಮ್ಮ ಮೈಸೂರ ದಸರಾ 2024

ಜಂಬೂಸವಾರಿ ವೀಕ್ಷಣೆಗೆ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ ಜನತೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಕ್ಷಣನೆ ಆರಂಭವಾಗಿದ್ದು, ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 1.41 ರಿಂದ 2.10 ಗಂಟೆಯ ವೇಳೆಗೆ ಮಕರ ಲಗ್ನದಲ್ಲಿ ಜರುಗುವ ನಂದಿ ಕಂಬಕ್ಕೆ ಪೂಜೆ ಸಲ್ಲಿಸಿದ್ದು, ನಂತರ ಸಂಜೆ 4 ರಿಂದ 4.30 ಗಂಟೆಯೊಳಗೆ ಸಲ್ಲುವ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಲಿದಾನೆ. ಈ ಐತಿಹಾಸಿಕ ಕ್ಷಣವನ್ನು ದೇಶ-ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ತುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್‌.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ.

ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್‌ಕುಮಾರ್‌ ಪಾರ್ಕ್‌ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸುವ ಕಾತುರದಲ್ಲಿ ಕಾಯುತ್ತಿದ್ದಾರೆ.

ಇನ್ನು ಮೈಸೂರಿನಲ್ಲಿ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದೆ. ಆದರೂ ಮಳೆಯ ನಡುವೆಯೂ ಜನತೆ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಸ್ತೆಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

14 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

14 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago