ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಕ್ಷಣನೆ ಆರಂಭವಾಗಿದ್ದು, ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 1.41 ರಿಂದ 2.10 ಗಂಟೆಯ ವೇಳೆಗೆ ಮಕರ ಲಗ್ನದಲ್ಲಿ ಜರುಗುವ ನಂದಿ ಕಂಬಕ್ಕೆ ಪೂಜೆ ಸಲ್ಲಿಸಿದ್ದು, ನಂತರ ಸಂಜೆ 4 ರಿಂದ 4.30 ಗಂಟೆಯೊಳಗೆ ಸಲ್ಲುವ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.
ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಲಿದಾನೆ. ಈ ಐತಿಹಾಸಿಕ ಕ್ಷಣವನ್ನು ದೇಶ-ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ತುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.
ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ.
ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್ಕುಮಾರ್ ಪಾರ್ಕ್ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸುವ ಕಾತುರದಲ್ಲಿ ಕಾಯುತ್ತಿದ್ದಾರೆ.
ಇನ್ನು ಮೈಸೂರಿನಲ್ಲಿ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದೆ. ಆದರೂ ಮಳೆಯ ನಡುವೆಯೂ ಜನತೆ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಸ್ತೆಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…