ನಮ್ಮ ಮೈಸೂರ ದಸರಾ 2024

ಸಮಷ್ಟಿ ಕವಿಗೋಷ್ಠಿಯು ಭಾವೈಕ್ಯತೆ ಸಾಮರಸ್ಯ ಕಲ್ಪಿಸುವ ವೇದಿಕೆ: ಡಾ. ಎಚ್. ಎಸ್ ಶಿವಪ್ರಕಾಶ್ ಅಭಿಮತ

ಮೈಸೂರು: ದಸರಾ ಕವಿಗೋಷ್ಠಿಯ ಪಂಚ ಕಾವ್ಯೋತ್ಸವದ ನಾಲ್ಕನೇ ದಿನವಾದ ಮಂಗಳವಾರ ‘ಸಮಷ್ಟಿ ಕವಿಗೋಷ್ಠಿ’ ಈ ವರ್ಷದ ಹೊಸ ವೈಶಿಷ್ಟ್ಯವಾಗಿದ್ದು, ಸಮಷ್ಟಿ ಕವಿಗೋಷ್ಠಿಯು ಭಾವೈಕ್ಯತೆಯ ಸಾಮರಸ್ಯ ಕಲ್ಪಿಸುವ ವೇದಿಕೆಯಾಗಿದೆ ಎಂದು ಹಿರಿಯ ಸಾಹಿತಿಗಳಾದ ಡಾ.ಎಚ್.ಎಸ್ ಶಿವಪ್ರಕಾಶ್ ಹೇಳಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ನಗರದ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಲಾಗಿದ್ದ ಸಮಷ್ಟಿ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ಪ್ರಪ್ರಥಮವಾಗಿ ಸಮಷ್ಟಿ ಬಹುಭಾಷ ಕವಿಗೋಷ್ಠಿಯನ್ನು ಆಯೋಜಿಸಿರುವುದು ಬಹಳ ಸಂತೋಷವಾಗಿದೆ. ಕಾವ್ಯಕ್ಕೆ ಭಾಷೆ ಒಂದು ಮಾಧ್ಯಮವಷ್ಟೆ. ಸಂವೇದನೆ ಎಂಬುದು ಎಲ್ಲಾ ಭಾಷೆಗಳಲ್ಲಿಯೂ ಸಮಾನ. ಬಹುಭಾಷೆಯ ಈ ಸಮ್ಮಿಲನ ಉದ್ಯಾನವನದಲ್ಲಿ ಅಲಂಕರಿಸಿದ ಬಗೆಬಗೆಯ ಹೂಗಳಿದ್ದಂತೆ ಎಂದು ವರ್ಣಿಸಿದರು.

ಪ್ರಸ್ತುತ ದಿನಮಾನಗಳಲ್ಲಿ ಭಾಷೆ ಮತ್ತು ಭಾವೈಕ್ಯತೆಯ ಸಾಮರಸ್ಯ ಅಗತ್ಯವಿದ್ದು, ಇಂತಹ ಕಾರ್ಯಕ್ರಮಗಳಿಂದ ಸಾಮರಸ್ಯ ಸಾಧಿಸಬಹುದು. ಇಷ್ಟು ವರ್ಷದಲ್ಲಿ ನಡೆದ ದಸರಾ ಕವಿಗೋಷ್ಠಿಯಲ್ಲಿ ಈ ವರ್ಷದ ಸಮಷ್ಟಿ ಕವಿಗೋಷ್ಠಿ ಮಾದರಿಯಾಗಿದೆ. ಮುಂಬರುವ ದಸರಾ ಕವಿಗೋಷ್ಠಿಗೆ ಮೈಸೂರಿನಲ್ಲಿ ಜಾಗತಿಕವಾಗಿ ಈ ಕವಿಗೋಷ್ಠಿ ನಡೆಯಬೇಕು ಎಂದು ಸಲಹೆ ನೀಡಿದರು.

ಕವಿಗೋಷ್ಠಿಯಲ್ಲಿ ಅಕ್ಷತಾರಾಜ್ ಪೆರ್ಲ ಅವರು ತುಳು ಭಾಷೆಯಲ್ಲಿ, ಕವಿಗಳಾದ ಇಂದಿರನ್ ರಾಜೇಂದ್ರನ್ ಅವರು ತಮಿಳಿನಲ್ಲಿ ‘ಹೆಂಡತಿಗೊoದು ಪ್ರೇಮಪತ್ರ’ ಎಂಬ ಕವನ, ಡಾ. ಋಷಿಕೇಶ್ ಅವರು ಒಡಿಯಾ ಭಾಷೆಯಲ್ಲಿ ‘ವಿಸರ್ಜನೆ’ ಎಂಬ ಕಾವ್ಯ ವಾಚನವನ್ನು, ಆಂಗ್ಲ ಭಾಷೆಯಲ್ಲಿ ಕನಸು ನಾಗತಿಹಳ್ಳಿ ಅವರು ತನ್ನ 6 ವರ್ಷದ ಮಗಳ ಕುರಿತು ‘ಲೀಲಾ-ಜಾಲ’ ಶೀರ್ಷಿಕೆಯಡಿ ಕವನವನ್ನು ಪ್ರಸ್ತುತಪಡಿಸಿದರು.

ಕಮಲ ಎಂ.ಆರ್ ಅವರು ಕನ್ನಡ ಭಾಷೆಯಲ್ಲಿ ‘ನನ್ನದೇ ನಿಘಂಟು’ ಎಂಬ ಕಾವ್ಯ ವಾಚನವನ್ನು, ಕಿರಣ್ ಕುಮಾರ್ ಎನ್ ಅವರು ಮಣಿಪುರಿ ಭಾಷೆಯಲ್ಲಿ ‘ಸ್ನೇಹಿತನಿಗೆ ಒಂದು ಪತ್ರ’ ಎಂಬ ಕಾವ್ಯ ವಾಚನ, ಜೊಸ್ಸಿ ಎಡ್ವಿನ್ ಪಿಂಟೋ ಅವರು ಕೊಂಕಣಿ ಭಾಷೆಯಲ್ಲಿ ‘ನನ್ನೂರು’ ಎಂಬ ಕಾವ್ಯ ವಾಚನವನ್ನು, ಡಾ.ದೀಪಕ್ ಭಟ್ ಅವರು ಸಂಸ್ಕೃತ ಭಾಷೆಯಲ್ಲಿ ಮೈಸೂರಿನ ಕುರಿತು ಸ್ವಾಗತ ಗೀತೆಯನ್ನು, ಡಾ. ನೀಲಿಮಾ ಗುಂಡಿ ಅವರು ಮರಾಠಿ ಭಾಷೆಯಲ್ಲಿ ‘ಓ ಭೂಮಿ’ ಎಂಬ ಶೀರ್ಷಿಕೆಯ ಕಾವ್ಯ ವಾಚನವನ್ನು, ಮನಮೋಹನ್ ಸಿಂಗ್ ಅವರು ಡೋಗ್ರಿ ಭಾಷೆಯಲ್ಲಿ ‘ನನ್ನ ಹುಡುಗಿಯೇ ಕೇಳು’ ಎಂಬ ಕವಿತೆಯನ್ನು, ಹಾಗೂ ಮಧುಸ್ ಪೂವಯ್ಯ ಅವರು ಕೊಡವ ಭಾಷೆಯ ‘ವರವ ಪ್ರಿಯ’ ಎಂಬ ವಾಚನ, ಸೇರಿದಂತೆ 15 ಕ್ಕೂ ಹೆಚ್ಚು ಬಹುಭಾಷ ಕವಿಗಳು ಕವನವನ್ನು ಪ್ರಸ್ತುತ ಪಡಿಸಿದರು.

ಕವಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಸ್ವಾಮಿ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಬಿ. ಜೆ. ವಿಜಯ್ ಕುಮಾರ್, ಕವಿಗೋಷ್ಠಿ ಉಪ ಸಮಿತಿ ಕಾರ್ಯಾಧ್ಯಕ್ಷರಾದ ಪ್ರೊ.ಎನ್.ಕೆ.ಲೋಲಾಕ್ಷಿ, ಉಪ ವಿಶೇಷಾಧಿಕಾರಿ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಕಾರ್ಯದರ್ಶಿ ಸಿ.ಕೃಷ್ಣ, ಅಧಿಕಾರೇತರ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

16 mins ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

25 mins ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

36 mins ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

1 hour ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

1 hour ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

2 hours ago