ನಮ್ಮ ಮೈಸೂರ ದಸರಾ 2024

ಸಮಷ್ಟಿ ಕವಿಗೋಷ್ಠಿಯು ಭಾವೈಕ್ಯತೆ ಸಾಮರಸ್ಯ ಕಲ್ಪಿಸುವ ವೇದಿಕೆ: ಡಾ. ಎಚ್. ಎಸ್ ಶಿವಪ್ರಕಾಶ್ ಅಭಿಮತ

ಮೈಸೂರು: ದಸರಾ ಕವಿಗೋಷ್ಠಿಯ ಪಂಚ ಕಾವ್ಯೋತ್ಸವದ ನಾಲ್ಕನೇ ದಿನವಾದ ಮಂಗಳವಾರ ‘ಸಮಷ್ಟಿ ಕವಿಗೋಷ್ಠಿ’ ಈ ವರ್ಷದ ಹೊಸ ವೈಶಿಷ್ಟ್ಯವಾಗಿದ್ದು, ಸಮಷ್ಟಿ ಕವಿಗೋಷ್ಠಿಯು ಭಾವೈಕ್ಯತೆಯ ಸಾಮರಸ್ಯ ಕಲ್ಪಿಸುವ ವೇದಿಕೆಯಾಗಿದೆ ಎಂದು ಹಿರಿಯ ಸಾಹಿತಿಗಳಾದ ಡಾ.ಎಚ್.ಎಸ್ ಶಿವಪ್ರಕಾಶ್ ಹೇಳಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ನಗರದ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಲಾಗಿದ್ದ ಸಮಷ್ಟಿ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ಪ್ರಪ್ರಥಮವಾಗಿ ಸಮಷ್ಟಿ ಬಹುಭಾಷ ಕವಿಗೋಷ್ಠಿಯನ್ನು ಆಯೋಜಿಸಿರುವುದು ಬಹಳ ಸಂತೋಷವಾಗಿದೆ. ಕಾವ್ಯಕ್ಕೆ ಭಾಷೆ ಒಂದು ಮಾಧ್ಯಮವಷ್ಟೆ. ಸಂವೇದನೆ ಎಂಬುದು ಎಲ್ಲಾ ಭಾಷೆಗಳಲ್ಲಿಯೂ ಸಮಾನ. ಬಹುಭಾಷೆಯ ಈ ಸಮ್ಮಿಲನ ಉದ್ಯಾನವನದಲ್ಲಿ ಅಲಂಕರಿಸಿದ ಬಗೆಬಗೆಯ ಹೂಗಳಿದ್ದಂತೆ ಎಂದು ವರ್ಣಿಸಿದರು.

ಪ್ರಸ್ತುತ ದಿನಮಾನಗಳಲ್ಲಿ ಭಾಷೆ ಮತ್ತು ಭಾವೈಕ್ಯತೆಯ ಸಾಮರಸ್ಯ ಅಗತ್ಯವಿದ್ದು, ಇಂತಹ ಕಾರ್ಯಕ್ರಮಗಳಿಂದ ಸಾಮರಸ್ಯ ಸಾಧಿಸಬಹುದು. ಇಷ್ಟು ವರ್ಷದಲ್ಲಿ ನಡೆದ ದಸರಾ ಕವಿಗೋಷ್ಠಿಯಲ್ಲಿ ಈ ವರ್ಷದ ಸಮಷ್ಟಿ ಕವಿಗೋಷ್ಠಿ ಮಾದರಿಯಾಗಿದೆ. ಮುಂಬರುವ ದಸರಾ ಕವಿಗೋಷ್ಠಿಗೆ ಮೈಸೂರಿನಲ್ಲಿ ಜಾಗತಿಕವಾಗಿ ಈ ಕವಿಗೋಷ್ಠಿ ನಡೆಯಬೇಕು ಎಂದು ಸಲಹೆ ನೀಡಿದರು.

ಕವಿಗೋಷ್ಠಿಯಲ್ಲಿ ಅಕ್ಷತಾರಾಜ್ ಪೆರ್ಲ ಅವರು ತುಳು ಭಾಷೆಯಲ್ಲಿ, ಕವಿಗಳಾದ ಇಂದಿರನ್ ರಾಜೇಂದ್ರನ್ ಅವರು ತಮಿಳಿನಲ್ಲಿ ‘ಹೆಂಡತಿಗೊoದು ಪ್ರೇಮಪತ್ರ’ ಎಂಬ ಕವನ, ಡಾ. ಋಷಿಕೇಶ್ ಅವರು ಒಡಿಯಾ ಭಾಷೆಯಲ್ಲಿ ‘ವಿಸರ್ಜನೆ’ ಎಂಬ ಕಾವ್ಯ ವಾಚನವನ್ನು, ಆಂಗ್ಲ ಭಾಷೆಯಲ್ಲಿ ಕನಸು ನಾಗತಿಹಳ್ಳಿ ಅವರು ತನ್ನ 6 ವರ್ಷದ ಮಗಳ ಕುರಿತು ‘ಲೀಲಾ-ಜಾಲ’ ಶೀರ್ಷಿಕೆಯಡಿ ಕವನವನ್ನು ಪ್ರಸ್ತುತಪಡಿಸಿದರು.

ಕಮಲ ಎಂ.ಆರ್ ಅವರು ಕನ್ನಡ ಭಾಷೆಯಲ್ಲಿ ‘ನನ್ನದೇ ನಿಘಂಟು’ ಎಂಬ ಕಾವ್ಯ ವಾಚನವನ್ನು, ಕಿರಣ್ ಕುಮಾರ್ ಎನ್ ಅವರು ಮಣಿಪುರಿ ಭಾಷೆಯಲ್ಲಿ ‘ಸ್ನೇಹಿತನಿಗೆ ಒಂದು ಪತ್ರ’ ಎಂಬ ಕಾವ್ಯ ವಾಚನ, ಜೊಸ್ಸಿ ಎಡ್ವಿನ್ ಪಿಂಟೋ ಅವರು ಕೊಂಕಣಿ ಭಾಷೆಯಲ್ಲಿ ‘ನನ್ನೂರು’ ಎಂಬ ಕಾವ್ಯ ವಾಚನವನ್ನು, ಡಾ.ದೀಪಕ್ ಭಟ್ ಅವರು ಸಂಸ್ಕೃತ ಭಾಷೆಯಲ್ಲಿ ಮೈಸೂರಿನ ಕುರಿತು ಸ್ವಾಗತ ಗೀತೆಯನ್ನು, ಡಾ. ನೀಲಿಮಾ ಗುಂಡಿ ಅವರು ಮರಾಠಿ ಭಾಷೆಯಲ್ಲಿ ‘ಓ ಭೂಮಿ’ ಎಂಬ ಶೀರ್ಷಿಕೆಯ ಕಾವ್ಯ ವಾಚನವನ್ನು, ಮನಮೋಹನ್ ಸಿಂಗ್ ಅವರು ಡೋಗ್ರಿ ಭಾಷೆಯಲ್ಲಿ ‘ನನ್ನ ಹುಡುಗಿಯೇ ಕೇಳು’ ಎಂಬ ಕವಿತೆಯನ್ನು, ಹಾಗೂ ಮಧುಸ್ ಪೂವಯ್ಯ ಅವರು ಕೊಡವ ಭಾಷೆಯ ‘ವರವ ಪ್ರಿಯ’ ಎಂಬ ವಾಚನ, ಸೇರಿದಂತೆ 15 ಕ್ಕೂ ಹೆಚ್ಚು ಬಹುಭಾಷ ಕವಿಗಳು ಕವನವನ್ನು ಪ್ರಸ್ತುತ ಪಡಿಸಿದರು.

ಕವಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಸ್ವಾಮಿ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಬಿ. ಜೆ. ವಿಜಯ್ ಕುಮಾರ್, ಕವಿಗೋಷ್ಠಿ ಉಪ ಸಮಿತಿ ಕಾರ್ಯಾಧ್ಯಕ್ಷರಾದ ಪ್ರೊ.ಎನ್.ಕೆ.ಲೋಲಾಕ್ಷಿ, ಉಪ ವಿಶೇಷಾಧಿಕಾರಿ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಕಾರ್ಯದರ್ಶಿ ಸಿ.ಕೃಷ್ಣ, ಅಧಿಕಾರೇತರ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

9 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

9 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

10 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

12 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

13 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

14 hours ago