ನಮ್ಮ ಮೈಸೂರ ದಸರಾ 2024

ಪದಕ ಗೆಲ್ಲಲು ಕ್ರೀಡಾಪಟುಗಳ ಪರಿಶ್ರಮ ಹಾಗೂ ತರಬೇತಿ ಅತ್ಯಗತ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತ ಹಾಕಿ ತಂಡದ ನಾಯಕ ಅರಮಾನ್ ಪ್ರೀತ್ ಸಿಂಗ್ ರ ಸಾಧನೆ ಯುವಕ್ರೀಡಾಪಟುಗಳಿಗೆ ಪ್ರೇರಣೆ

ಮೈಸೂರು : ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ, ಗುರಿ, ಗುಣಮಟ್ಟದ ತರಬೇತಿ ಸಿಕ್ಕಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ಚಾಮುಂಡೇಶ್ವರಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದರು.

ದಸರಾ ವಿಶ್ವಖ್ಯಾತಿ ಪಡೆದಿರುವ ಉತ್ಸವ. ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಭೇಟಿ ನೀಡುತ್ತಾರೆ. ದಸರಾ ಉತ್ಸವದ ಅಂಗವಾಗಿ ಸಿಎಂ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ರೀಡೆಯಲ್ಲಿ ಪದಕ ಗೆಲ್ಲುವುದು ಒಂದು ಭಾಗವಾದರೆ, ಕ್ರೀಡೆಯಲ್ಲಿ ಭಾಗವಹಿಸುವುದೂ ಮುಖ್ಯ. ರಾಜ್ಯದ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಆಗಮಿಸಿದ್ದು, ಪದಕ ಗೆಲ್ಲುವ ಪ್ರಯತ್ನ ಬಹಳ ಮುಖ್ಯ ಎಂದರು.

ಮುಂದಿನ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲಲು ಸಿಎಂ ಹಾರೈಕೆ

ಯುವಜನತೆ ಕ್ರೀಡೆಯೊಂದಿಗೆ ಓದಿನ ಕಡೆಗೂ ಸೂಕ್ತ ಗಮನ ಹರಿಸಬೇಕು. ಎಲ್ಲ ಕ್ರೀಡಾಪಟುಗಳನ್ನು ಶುಭ ಹಾರೈಸುತ್ತೇನೆ ಎಂದರು.

ಅರಮಾನ್ ಪ್ರೀತ್ ಸಿಂಗ್ ಅವರು ಭಾರತ ಹಾಕಿ ತಂಡದ ನಾಯಕರಾಗಿದ್ದು, ಭಾರತ ತಂಡಕ್ಕೆ ಗೆಲುವನ್ನು ತಂದುಕೊಟ್ಟಿದ್ದಾರೆ. ಅರಮಾನ್ ಪ್ರೀತ್ ಸಿಂಗ್ ಅವರು 200 ಕ್ಕೂ ಹೆಚ್ಚು ಗೋಲುಗಳನ್ನು ಬಾರಿಸಿರುವ ಕೀರ್ತಿ ಸಲ್ಲುತ್ತದೆ. ಕಳೆದ ಒಲಂಪಿಕ್ಸ್ ನಲ್ಲಿ ಇವರ ನಾಯಕತ್ವದಲ್ಲಿ ಭಾರತ ಕಂಚಿನ ಪದಕವನ್ನು ಗೆಲ್ಲಲು ಸಾಧ್ಯವಾಯಿತು. ಮುಂದಿನ ಒಲಂಪಿಕ್ಸ್ ನಲ್ಲಿ ಅವರು ಭಾರತಕ್ಕೆ ಚಿನ್ನದ ಪದಕವನ್ನು ಗೆಲ್ಲುವಂತಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಅರಮಾನ್ ಪ್ರೀತ್ ಸಿಂಗ್ ಅವರನ್ನು ಇಲ್ಲಿನ ಕ್ರೀಡಾಕೂಟಕ್ಕೆ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರ ಕ್ರೀಡೆಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತದೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

38 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

4 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

4 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

4 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

4 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

4 hours ago