ನಮ್ಮ ಮೈಸೂರ ದಸರಾ 2024

ದಸರಾ ಸಂಭ್ರಮದಲ್ಲಿ ಮೈಸೂರಿನ ಪ್ರಸಿದ್ಧ ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ  ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, ದಸರಾ ಕುಸ್ತಿ ಪಂದ್ಯಾವಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಚಾಲನೆ ನೀಡಿದರು.

ನಂತರದಲ್ಲಿ ದೊಡ್ಡಕರೆ ಮೈದಾನ ಆವರಣದ  ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ದಾವಣಗೆರೆ ಕ್ರೀಡಾನಿಲಯದ ಪೈಲ್ವಾನ್ ರಾಘವೇಂದ್ರ ಮತ್ತು ಮೈಸೂರಿನ ಮಹದೇವಪುರ ಪೈಲ್ವಾನ್ ವಿಕಾಶ್ ಅವರ ಭುಜ ತಟ್ಟುವ ಮೂಲಕ ಕುಸ್ತಿ ಪಂದ್ಯಾವಳಿಗೆ ವಿದ್ಯುಕ್ತ ಚಾಲನೆ ನೀಡಿದರು.

ಬಾಲಕಿಯರ ಮೊದಲ ಎರಡು ಕುಸ್ತಿ ಪಂದ್ಯದಲ್ಲಿ ಮಂಡ್ಯ ಪೈ.ಸುಹಾನ ಬಾನು ವಿರುದ್ಧ ಗಾಣಿಗನಕೊಪ್ಪಲು ಪೈ.ನಂದಿನಿ ಹಾಗೂ ಮಳವಳ್ಳಿ ಪೈ.ಎಂ.ಕೆ.ಮೋನಿಕಾ ವಿರುದ್ಧ ರಮ್ಮನಹಳ್ಳಿ ಪೈ.ಯಶಸ್ವಿನಿ ಜಯಬೇರಿ ಬಾರಿಸಿದರು. ಈ ಬಾರಿ ದಸರಾ ಮಹೋತ್ಸವದಲ್ಲಿ ಕುಸ್ತಿ ಪಂದ್ಯಾವಳಿ ಅಭಿಮಾನಿಗಳಿಗೆ ರೋಮಾಂಚನ ನೀಡಿತು.

ಈ ಸಂದರ್ಭದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಗ್ಯಾರಂಟಿ ಯೋಜನೆ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಗುಣರಂಜನ್ ಶೆಟ್ಟಿ, ದಸರಾ ಕುಸ್ತಿ ಉಪಸಮಿತಿ ಉಪ ವಿಶೇಷಾಧಿಕಾರಿ ಎಲ್.ನಾಗೇಶ್, ಕಾರ್ಯಾಧ್ಯಕ್ಷ ಡಾ.ಎನ್.ಸಿ.ವೆಂಕಟರಾಜು, ಕಾರ್ಯದರ್ಶಿ ಬಿ.ಎಸ್.ರಘು ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

7 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

8 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

9 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

9 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

9 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

10 hours ago