ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆ ಆರಂಭಾಗಿದೆ.
ಶನಿವಾರ(ಆ.12)ಮಧ್ಯಾಹ್ನ ಶುಭ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪರ್ಚನೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಅರಮನೆ ಅಂಗಳದಿಂದ ಬನ್ನಿಮಂಟಪದವರೆಗೆ ಸಾಗುತ್ತಿರುವ ಮೆರವಣಿಗೆಯಲ್ಲಿ ಚಾಮುಂಡಿ ವಿಗ್ರಹವಿರು 750ಕೆ.ಜಿ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಆನೆ ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದನು. ಇತರೆ 9 ಆನೆಗಳು ಅಭಿಮನ್ಯುವಿಗ ಸಾಥ್ ನೀಡಿದವು.
ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳ ಸ್ತಬ್ಧಚಿತ್ರಗಳು ಗಮನ ಸೆಳೆಯುತ್ತಿವೆ. ನಂದಿ ಕುಣಿತ, ವೀರಗಾಸೆ, ಗಾರುಡಿ ಗೊಂಬೆ ಕುಣಿತ, ನೃತ್ಯಗಳು ಕಳೆಗಟ್ಟಿತು.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಗೆ ಮೈಸೂರು ನಗರ ನವ ವಧುವಿನಂತೆ ಸಿಂಗಾರಗೊಂಡಿತ್ತು. ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು, ಅರಮನೆ ಸೇರಿದಂತೆ ನಗರದಾದ್ಯಂತ ಬಿಗಿ ಭದ್ರೆತೆ ಮಾಡಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…