ಮೈಸೂರು: ಸಂಗೀತ, ಸಾಹಿತ್ಯ, ಕಲೆ, ಕೃಷಿ, ಹೈನುಗಾರಿಗೆ, ಕ್ರೀಡೆ, ಮಹಿಳೆಯರ ಕೊಡುಗೆಗಳು, ಜನರ ಜೀವನ ಕ್ರಮ ಹಾಗೂ ಮೌಲ್ಯಗಳು ಅಭಿವ್ಯಕ್ತಿಯಾದ ಈ ಬಾರಿಯ ದಸರಾವು ಸಾಂಸ್ಕೃತಿಕ ಚಳಿವಳಿಯಾಗಿ ಜರುಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಕುಪ್ಪಣ್ಣ ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ “ದಸರಾ ಫಲಪುಷ್ಪ ಪ್ರದರ್ಶನ”ದಲ್ಲಿ ಅತ್ಯುತ್ತಮ ಉದ್ಯಾನ ವಿನ್ಯಾಸಗೊಳಿಸಿದ ವಿಜೇತರಿಗೆ ಪ್ರಶಸ್ತಿ ವಿತರಿಸಿದ ಸಚಿವರು ಮಾತನಾಡಿದರು.
ರಾಜ್ಯದಲ್ಲಿ ಉತ್ತಮವಾಗಿ ಮಳೆಯಾದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದ್ದೂರಿ ದಸರಾ ಆಚರಿಸುವಂತೆ ತಿಳಿಸಿದ್ದರು. ಅದರಂತೆ ಜನರಲ್ಲಿ ಸಹೋದರತೆ, ಸೌಹಾರ್ದತೆ, ಘನತೆಯ ಬದುಕನ್ನು ಬಿತ್ತುವಂತೆ ಈ ಬಾರಿಯ ದಸರಾವನ್ನು ಆಚರಿಸಲಾಗಿದೆ. ದರ್ಮ, ಜಾತಿಗೂ ಮೀರಿದ ಸಮಾಜವನ್ನು ನಿರ್ಮಿಸುವ ಸಂದೇಶ ಸಾರಲಾಗಿದೆ ಎಂದರು.
ಈ ಬಾರಿಯ ದಸರಾ ವಿಭಿನ್ನವಾಗಿತ್ತು ಎಂಬ ಉತ್ತಮ ಅಭಿಪ್ರಾಯ ಜನರಿಂದ ಕೇಳಿಬಂದಿದೆ. ದಸರಾ ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿದ್ದು, ಜನರು ಕೂಡ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರಿಂದ ಜನರ ದಸರಾವಾಗಿ ಪರಿಣಮಿಸಿದೆ. ದಸರಾ ಯಶಸ್ಸಿಗೆ ಮೈಸೂರಿನ ಎಲ್ಲಾ ಜನತೆ ಕಾರಣೀಭೂತರಾಗಿದ್ದಾರೆ. ಈ ಯಶಸ್ವಿ ದಸರಾ ಆಚರಣೆ ಮೂಲಕ ರಾಜ್ಯ ಸರ್ಕಾರಕ್ಕೆ ಸಾಂಸ್ಕೃತಿಕ ಕಿರೀಟ ಇಟ್ಟಂತಾಗಿದೆ ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯಿಂದ ಫಲಪುಷ್ಟ ಪ್ರದರ್ಶನವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ವಿವಿಧ ಪುಷ್ಪಗಳು ಹಾಗೂ ಸಿರಿಧಾನ್ಯಗಳಿಂದ ಬಗೆಬಗೆಯ ಕಲಾ ಪ್ರಕಾರಗಳನ್ನು ರಚಿಸಿ ಜನರ ಮೆಚ್ಚುಗೆ ಗಳಿಸಲಾಗಿದೆ. ಸುಮಾರು 5 ಲಕ್ಷಕ್ಕಿಂತ ಹೆಚ್ಚು ಜನರು ವೀಕ್ಷಣೆ ಮಾಡಿರುವುದು ಸಂತೋಷದ ವಿಚಾರ ಎಂದು ಹೇಳಿದರು.
ಗಾಜಿನಮನೆಯಲ್ಲಿ ಸಿದ್ಧಪಡಿಸಿರುವ `ಪ್ರಜಾಪ್ರಭುತ್ವ ನಡೆದು ಬಂದ ದಾರಿ’ ಎಂಬ ಪರಿಕಲ್ಪನೆಯ ವಿನ್ಯಾಸವು ಆರನೇ ಶತಮಾನದಿಂದ ಇಲ್ಲಿಯವರೆಗೆ ಪ್ರಜಾಪ್ರಭುತ್ವ ವ್ಯವಸ್ಥೆ ಹೇಗಿತ್ತು ಎಂಬುದನ್ನು ಹೇಳುತ್ತದೆ. ಬುದ್ಧರ ಕಾಲ, ಅನುಭವ ಮಂಟಪ, ಸ್ವಾತಂತ್ರ್ಯ ಚಳುವಳಿ, ಸಂವಿಧಾನ, ಸಂಸತ್ ಭವನ ಎಲ್ಲವನ್ನು ಸುಂದರವಾಗಿ ವಿನ್ಯಾಸಗೊಳಿಸುವ ಮೂಲಕ ಪ್ರಪಂಚಕ್ಕೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ವಿವರಿಸಲಾಗಿದೆ ಎಂದು ಪ್ರಶಂಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ , ತೋಟಗಾರಿಕೆ ಉಪನಿರ್ದೇಶಕರಾದ ಮಂಜುನಾಥ್, ಹಿರಿಯ ಸಹಾಯಕ ನಿರ್ದೇಶಕರಾದ ಹಬೀಬಾ ನಿಶಾತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…