ನಮ್ಮ ಮೈಸೂರ ದಸರಾ 2024

ಸಾಂಸ್ಕೃತಿಕ ಚಳುವಳಿಯಾದ ಈ ಬಾರಿಯ ದಸರಾ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು:  ಸಂಗೀತ, ಸಾಹಿತ್ಯ, ಕಲೆ, ಕೃಷಿ, ಹೈನುಗಾರಿಗೆ, ಕ್ರೀಡೆ, ಮಹಿಳೆಯರ ಕೊಡುಗೆಗಳು, ಜನರ ಜೀವನ ಕ್ರಮ ಹಾಗೂ ಮೌಲ್ಯಗಳು ಅಭಿವ್ಯಕ್ತಿಯಾದ ಈ ಬಾರಿಯ ದಸರಾವು ಸಾಂಸ್ಕೃತಿಕ ಚಳಿವಳಿಯಾಗಿ ಜರುಗಿದೆ ಎಂದು ಸಮಾಜ ಕಲ್ಯಾಣ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ  ಹೇಳಿದರು.

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಕುಪ್ಪಣ್ಣ ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ “ದಸರಾ ಫಲಪುಷ್ಪ ಪ್ರದರ್ಶನ”ದಲ್ಲಿ ಅತ್ಯುತ್ತಮ ಉದ್ಯಾನ ವಿನ್ಯಾಸಗೊಳಿಸಿದ ವಿಜೇತರಿಗೆ ಪ್ರಶಸ್ತಿ ವಿತರಿಸಿದ ಸಚಿವರು ಮಾತನಾಡಿದರು.

ರಾಜ್ಯದಲ್ಲಿ ಉತ್ತಮವಾಗಿ ಮಳೆಯಾದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದ್ದೂರಿ ದಸರಾ ಆಚರಿಸುವಂತೆ ತಿಳಿಸಿದ್ದರು. ಅದರಂತೆ ಜನರಲ್ಲಿ ಸಹೋದರತೆ, ಸೌಹಾರ್ದತೆ, ಘನತೆಯ ಬದುಕನ್ನು ಬಿತ್ತುವಂತೆ ಈ ಬಾರಿಯ ದಸರಾವನ್ನು ಆಚರಿಸಲಾಗಿದೆ. ದರ್ಮ, ಜಾತಿಗೂ ಮೀರಿದ ಸಮಾಜವನ್ನು ನಿರ್ಮಿಸುವ ಸಂದೇಶ ಸಾರಲಾಗಿದೆ ಎಂದರು.

ಈ ಬಾರಿಯ ದಸರಾ ವಿಭಿನ್ನವಾಗಿತ್ತು ಎಂಬ ಉತ್ತಮ ಅಭಿಪ್ರಾಯ ಜನರಿಂದ ಕೇಳಿಬಂದಿದೆ. ದಸರಾ ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿದ್ದು, ಜನರು ಕೂಡ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರಿಂದ ಜನರ ದಸರಾವಾಗಿ ಪರಿಣಮಿಸಿದೆ. ದಸರಾ ಯಶಸ್ಸಿಗೆ ಮೈಸೂರಿನ ಎಲ್ಲಾ ಜನತೆ ಕಾರಣೀಭೂತರಾಗಿದ್ದಾರೆ. ಈ ಯಶಸ್ವಿ ದಸರಾ ಆಚರಣೆ ಮೂಲಕ ರಾಜ್ಯ ಸರ್ಕಾರಕ್ಕೆ ಸಾಂಸ್ಕೃತಿಕ ಕಿರೀಟ ಇಟ್ಟಂತಾಗಿದೆ ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯಿಂದ ಫಲಪುಷ್ಟ ಪ್ರದರ್ಶನವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ವಿವಿಧ ಪುಷ್ಪಗಳು ಹಾಗೂ ಸಿರಿಧಾನ್ಯಗಳಿಂದ ಬಗೆಬಗೆಯ ಕಲಾ ಪ್ರಕಾರಗಳನ್ನು ರಚಿಸಿ ಜನರ ಮೆಚ್ಚುಗೆ ಗಳಿಸಲಾಗಿದೆ. ಸುಮಾರು 5 ಲಕ್ಷಕ್ಕಿಂತ ಹೆಚ್ಚು ಜನರು ವೀಕ್ಷಣೆ ಮಾಡಿರುವುದು ಸಂತೋಷದ ವಿಚಾರ ಎಂದು ಹೇಳಿದರು.

ಗಾಜಿನಮನೆಯಲ್ಲಿ ಸಿದ್ಧಪಡಿಸಿರುವ `ಪ್ರಜಾಪ್ರಭುತ್ವ ನಡೆದು ಬಂದ ದಾರಿ’ ಎಂಬ ಪರಿಕಲ್ಪನೆಯ ವಿನ್ಯಾಸವು ಆರನೇ ಶತಮಾನದಿಂದ ಇಲ್ಲಿಯವರೆಗೆ ಪ್ರಜಾಪ್ರಭುತ್ವ ವ್ಯವಸ್ಥೆ ಹೇಗಿತ್ತು ಎಂಬುದನ್ನು ಹೇಳುತ್ತದೆ. ಬುದ್ಧರ ಕಾಲ, ಅನುಭವ ಮಂಟಪ, ಸ್ವಾತಂತ್ರ್ಯ ಚಳುವಳಿ, ಸಂವಿಧಾನ, ಸಂಸತ್ ಭವನ ಎಲ್ಲವನ್ನು ಸುಂದರವಾಗಿ ವಿನ್ಯಾಸಗೊಳಿಸುವ ಮೂಲಕ ಪ್ರಪಂಚಕ್ಕೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ವಿವರಿಸಲಾಗಿದೆ ಎಂದು ಪ್ರಶಂಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ , ತೋಟಗಾರಿಕೆ ಉಪನಿರ್ದೇಶಕರಾದ ಮಂಜುನಾಥ್, ಹಿರಿಯ ಸಹಾಯಕ ನಿರ್ದೇಶಕರಾದ ಹಬೀಬಾ ನಿಶಾತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago