ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ವೈಭವಯುತ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ.
ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ ನಡೆಯಲಿದ್ದು, ಸಂಜೆ 4.30 ಗಂಟೆಯಿಂದ 5 ಗಂಟೆಯವರೆಗೆ ಶಿವಶರಣ್ಯ ಎಸ್.ಸ್ವಾಮಿ ಮತ್ತು ತಂಡದಿಂದ ತತ್ವಪದ ಗಾಯನ ಏರ್ಪಡಿಸಲಾಗಿದೆ. ಸಂಜೆ 5 ಗಂಟೆಯಿಂದ 5.30 ಗಂಟೆಯವರೆಗೆ ಭಾರತೀಯ ವಿದ್ಯಾಭವನ (ಕಲಾಭಾರತಿ) ರವರಿಂದ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಆಯೋಜಿಸಲಾಗಿದ್ದು, ಸಂಜೆ 5.30 ಗಂಟೆಯಿಂದ 6 ಗಂಟೆಯವರೆಗೆ ಕನ್ನಡ ಕಲಾಲಯ ಟ್ರಸ್ಟ್ ನ ವಿದುಷಿ ಪ್ರಿಯಾಂಕ ಎಲ್ ರವರಿಂದ ನೃತ್ಯರೂಪಕ ನವದುರ್ಗಾವೈಭವ ಕಾರ್ಯಕ್ರಮ ನಡೆಯಲಿದೆ.
ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಪಂಡಿತ್ ನರಸಿಂಹಲು ವಡವಾಟಿ ಮತ್ತು ವಿದ್ವಾನ್ ಕದ್ರಿ ರಮೇಶ್ ನಾಥ್ ಅವರಿಂದ ಕ್ಲಾರಿಯೋನೆಟ್-ಸ್ಯಾಕ್ಸೋಫೋನ್ ಜುಗಲ್ ಬಂದಿ ನಡೆಯಲಿದ್ದು, ರಾತ್ರಿ 7 ಗಂಟೆಯಿಂದ 7.10 ರವರೆಗೆ ಶರಣ್ಯ ನಟರಾಜ್ ಮತ್ತು ತಂಡದವರಿಂದ ಕಥಕ್ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ. ರಾತ್ರಿ 7.10 ಗಂಟೆಯಿಂದ 8.40 ರವರೆಗೆ ಎಚ್ ಜನಾರ್ದನ್ (ಜನ್ನಿ) ಮತ್ತು ತಂಡದವರಿಂದ ಜನಪದ ಸಂಭ್ರಮ ನಡೆಯಲಿದ್ದು, ರಾತ್ರಿ 8.40 ರಿಂದ 10.10 ರವರೆಗೆ ಅಗಮ್ ಬ್ಯಾಂಡ್ – ಹರೀಶ್ ಕೃಷ್ಣನ್ ಅವರಿಂದ ಕರ್ನಾಟಕ ಶಾಸ್ತ್ರೀಯ ವಾದ್ಯವೃಂದ ನಡೆಯಲಿದೆ.
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…