ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ವೈಭವಯುತ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ.
ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ ನಡೆಯಲಿದ್ದು, ಸಂಜೆ 4.30 ಗಂಟೆಯಿಂದ 5 ಗಂಟೆಯವರೆಗೆ ಶಿವಶರಣ್ಯ ಎಸ್.ಸ್ವಾಮಿ ಮತ್ತು ತಂಡದಿಂದ ತತ್ವಪದ ಗಾಯನ ಏರ್ಪಡಿಸಲಾಗಿದೆ. ಸಂಜೆ 5 ಗಂಟೆಯಿಂದ 5.30 ಗಂಟೆಯವರೆಗೆ ಭಾರತೀಯ ವಿದ್ಯಾಭವನ (ಕಲಾಭಾರತಿ) ರವರಿಂದ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಆಯೋಜಿಸಲಾಗಿದ್ದು, ಸಂಜೆ 5.30 ಗಂಟೆಯಿಂದ 6 ಗಂಟೆಯವರೆಗೆ ಕನ್ನಡ ಕಲಾಲಯ ಟ್ರಸ್ಟ್ ನ ವಿದುಷಿ ಪ್ರಿಯಾಂಕ ಎಲ್ ರವರಿಂದ ನೃತ್ಯರೂಪಕ ನವದುರ್ಗಾವೈಭವ ಕಾರ್ಯಕ್ರಮ ನಡೆಯಲಿದೆ.
ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಪಂಡಿತ್ ನರಸಿಂಹಲು ವಡವಾಟಿ ಮತ್ತು ವಿದ್ವಾನ್ ಕದ್ರಿ ರಮೇಶ್ ನಾಥ್ ಅವರಿಂದ ಕ್ಲಾರಿಯೋನೆಟ್-ಸ್ಯಾಕ್ಸೋಫೋನ್ ಜುಗಲ್ ಬಂದಿ ನಡೆಯಲಿದ್ದು, ರಾತ್ರಿ 7 ಗಂಟೆಯಿಂದ 7.10 ರವರೆಗೆ ಶರಣ್ಯ ನಟರಾಜ್ ಮತ್ತು ತಂಡದವರಿಂದ ಕಥಕ್ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ. ರಾತ್ರಿ 7.10 ಗಂಟೆಯಿಂದ 8.40 ರವರೆಗೆ ಎಚ್ ಜನಾರ್ದನ್ (ಜನ್ನಿ) ಮತ್ತು ತಂಡದವರಿಂದ ಜನಪದ ಸಂಭ್ರಮ ನಡೆಯಲಿದ್ದು, ರಾತ್ರಿ 8.40 ರಿಂದ 10.10 ರವರೆಗೆ ಅಗಮ್ ಬ್ಯಾಂಡ್ – ಹರೀಶ್ ಕೃಷ್ಣನ್ ಅವರಿಂದ ಕರ್ನಾಟಕ ಶಾಸ್ತ್ರೀಯ ವಾದ್ಯವೃಂದ ನಡೆಯಲಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…